ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳನ್ನ ಆ ರಾಜ್ಯದ ಯುವಕರಿಗೆ ಮಾತ್ರವೇ ಸೀಮಿತ ಮಾಡಲಾಗಿದೆ ಎಂದು ಘೋಷಿದ್ದಾರೆ.
ರಾಜ್ಯದ ಜನರಿಗಷ್ಟೇ ಸರ್ಕಾರಿ ಹುದ್ದೆ: ಮಧ್ಯಪ್ರದೇಶ ಸಿಎಂ ಮಹತ್ವದ ನಿರ್ಧಾರ
ರಾಜ್ಯದ ಎಲ್ಲ ಸರ್ಕಾರಿ ನೌಕರಿಗಳನ್ನ ಮಧ್ಯಪ್ರದೇಶದ ಜನರಿಗಷ್ಟೇ ನೀಡಲು ಮಧ್ಯ ಪ್ರದೇಶ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಬೇಕಾದ ಎಲ್ಲ ಕಾನೂನು ಕ್ರಮಗಳನ್ನು ಶೀಘ್ರದಲ್ಲೇ ತರುತ್ತೇವೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್
ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಅವರು, ರಾಜ್ಯದ ಎಲ್ಲ ಸರ್ಕಾರಿ ನೌಕರಿಯನ್ನು ಮಧ್ಯಪ್ರದೇಶದ ಜನರಿಗಷ್ಟೇ ನೀಡಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ಬೇಕಾದ ಎಲ್ಲ ಕಾನೂನು ಕ್ರಮಗಳನ್ನು ಶೀಘ್ರದಲ್ಲೇ ತರುತ್ತೇವೆ ಎಂದು ಘೋಷಿಸಿದ್ದಾರೆ.