ನವದೆಹಲಿ: ಕೇಂದ್ರ ಸರ್ಕಾರ ಕೊನೆಗೂ 2016ರ ರೈತರ ಆತ್ಮಹತ್ಯೆ ದತ್ತಾಂಶವನ್ನು ಬಿಡುಗಡೆ ಮಾಡಿದೆ. ವರ್ಷದಿಂದ ವರ್ಷಕ್ಕೆ ಅನ್ನದಾತನ ಆತ್ಮಹತ್ಯೆ ಸಂಖ್ಯೆಯಲ್ಲಿ ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ಛತ್ತೀಸ್ಘಡ್ ಸೇರಿದಂತೆ ಇತರ ರಾಜ್ಯಗಳಲ್ಲಿ ಇಳಿಕೆಯಾಗಿದೆ. ಆದ್ರೆ ನಮ್ಮ ರಾಜ್ಯದಲ್ಲಿ ಮಾತ್ರ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದು ಆತಂಕ ಮೂಡಿಸಿದೆ.
ಇತ್ತೀಚೆಗೆ ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿಆರ್ಬಿ) ಬಿಡುಗಡೆ ಮಾಡಿರುವ 2016ರ ರೈತರ ಆತ್ಮಹತ್ಯೆ ದತ್ತಾಂಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮೊದಲನೇ ಸ್ಥಾನ ಮಹಾರಾಷ್ಟ್ರ ಅಲಂಕರಿಸಿದೆ.