ಕರ್ನಾಟಕ

karnataka

By

Published : Nov 19, 2019, 6:25 AM IST

ETV Bharat / bharat

ಶಿವಸೇನೆಗೆ ಕೈಕೊಟ್ಟ ಎನ್​​ಸಿಪಿ: ಮೈತ್ರಿ ಸರ್ಕಾರ ರಚನೆ ಬಗ್ಗೆ ಸೋನಿಯಾ ಜತೆ ಮಾತುಕತೆ ನಡೆದಿಲ್ಲ ಎಂದ ಪವಾರ್​​!

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ದಿನದಿಂದ ದಿನಕ್ಕೆ ಮುಂದೂಡಿಕೆಯಾಗುತ್ತಿದ್ದು, ಇದೀಗ ಸೋನಿಯಾ ಗಾಂಧಿ ಭೇಟಿಯಾಗಿರುವ ಎನ್​ಸಿಪಿ ಮುಖಂಡ ಶರದ್​ ಪವಾರ್​ ಇನ್ನೊಂದು ರೀತಿ ಹೇಳಿಕೆ ನೀಡಿದ್ದಾರೆ.

ಶಿವಸೇನೆಗೆ ಕೈಕೊಟ್ಟ ಎನ್​​ಸಿಪಿ

ಮುಂಬೈ:ಮಹಾರಾಷ್ಟ್ರದಲ್ಲಿ ಎನ್​​ಸಿಪಿ+ಕಾಂಗ್ರೆಸ್​ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುವ ಕನಸು ಕಾಣುತ್ತಿದ್ದ ಶಿವಸೇನೆಗೆ ಇದೀಗ ದಿಢೀರ್​ ಶಾಕ್​ ಆಗಿದ್ದು, ಸೋನಿಯಾ ಗಾಂಧಿ ಜತೆ ತಾವು ಮೈತ್ರಿ ಸರ್ಕಾರ ರಚನೆ ಬಗ್ಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಶರದ್​ ಪವಾರ್​ ಹೇಳಿಕೆ ನೀಡಿದ್ದಾರೆ.

ಶಿವಸೇನೆಯ 50: 50 ಸೂತ್ರಕ್ಕೆ ಬಿಜೆಪಿ ನಿರಾಕರಣೆ ಮಾಡುತ್ತಿದ್ದಂತೆ ಅದರೊಂದಿಗೆ ಹೊಂದಿದ್ದ ಸಂಬಂಧ ಕಳೆದುಕೊಂಡು ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದ ಶಿವಸೇನೆ ಈಗಾಗಲೇ ಕಾಂಗ್ರೆಸ್​ ಹಾಗೂ ಎನ್​​ಸಿಪಿ ಮುಖಂಡರೊಂದಿಗೆ ಅನೇಕ ಸುತ್ತಿನ ಮಾತುಕತೆ ನಡೆಸಿತ್ತು. ಆದರೆ ನಿನ್ನೆ ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಭೇಟಿ ಮಾಡಿ ಸುಮಾರು ಗಂಟೆಗಳ ಕಾಲ ಚರ್ಚೆ ನಡೆಸಿರುವ ಎನ್​ಸಿಪಿ ಮುಖಂಡ ಶರದ್​ ಪವಾರ್​​, ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಕುರಿತು ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ ಎಂದಿದ್ದು, ಇಲ್ಲಿನ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಶಿವಸೇನೆಗೆ ಕೈಕೊಟ್ಟ ಎನ್​​ಸಿಪಿ

ಇದೇ ವೇಳೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ವಿಚಾರವಾಗಿ ಮುಂದಿನ ಎರಡು ದಿನದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಆದರೆ ಈ ಹಿಂದೆ ಚುನಾವಣೆಯಲ್ಲಿ ಶಿವಸೇನೆ+ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಅವುಗಳ ಹಾದಿ ಅವರಿಗೆ, ನಮ್ಮ ದಾರಿ ನಮಗೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಇದರಿಂದ ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿದ್ದ ಶಿವಸೇನಗೆ ಇದೀಗ ಮತ್ತಷ್ಟು ಹಿನ್ನೆಡೆಯಾಗಿದೆ.

ಇದೇ ವೇಳೆ ಮಾತಮಾಡಿರುವ ಶಿವಸೇನೆ ಮುಖಂಡ ಸಂಜಯ್​ ರಾವತ್​,ಆದಷ್ಟು ಬೇಗ ಶಿವಸೇನೆ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ. ಆದರೆ ಕೇಂದ್ರ ಸಚಿವ ರಾಮದಾಸ್​ ಅಠವಾಳೆ ಮಾತ್ರ ಇದಕ್ಕೆ ವಿರುದ್ಧವಾದ ಹೇಳಿಕೆ ನೀಡಿದ್ದು, ನಾನು ಈಗಾಗಲೇ ರಾವತ್ ಜತೆ ಮಾತನಾಡಿದ್ದು, ಮಹಾರಾಷ್ಟ್ರದಲ್ಲಿ ಮೂರು ವರ್ಷ ಬಿಜೆಪಿ ಸಿಎಂ ಹಾಗೂ ಎರಡು ವರ್ಷ ಶಿವಸೇನೆ ಮುಖ್ಯಮಂತ್ರಿ ಸ್ಥಾನಕ್ಕೆ ಆಫರ್​ ಇಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ABOUT THE AUTHOR

...view details