ನವದೆಹಲಿ:ವಿಶ್ವದಾದ್ಯಂತ ಹರಡುತ್ತಿರುವ ಕೊರೊನಾ ವೈರಸ್ನಿಂದಾಗಿ ಜನರು ಭಯಭೀತರಾಗಿದ್ದು, ಇತ್ತ ಭಾರತಕ್ಕೂ ಕೊವಿಡ್-19 ಹೆಜ್ಜೆ ಇಟ್ಟಿದೆ. ಈ ಹಿನ್ನೆಲೆ ಕೊರೊನಾ ಹರಡುವ ಭೀತಿಯಿಂದಾಗಿ ಈ ಬಾರಿ ರಾಷ್ಟಪತಿ ಭವನದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಹೋಳಿ ಕೂಟ ಇರುವುದಿಲ್ಲ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಕೊರೊನಾ ವೈರಸ್ ಹರಡದಂತೆ ನಾವು ಮುಂಜಾಗ್ರತೆ ವಹಿಸಬೇಕು. ಈ ಹಿನ್ನೆಲೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಹೋಳಿ ಕೂಟ ನಡೆಸುವುದಿಲ್ಲ ಎಂದು ಹೇಳಿದ್ದಾರೆ.