ಕರ್ನಾಟಕ

karnataka

ಕಲ್ಲು ಕ್ವಾರಿಯಲ್ಲಿ ಸ್ಫೋಟ, ಮೂವರ ದುರ್ಮರಣ, ಆರು ಮಂದಿ ಸ್ಥಿತಿ ಗಂಭೀರ!

ಕಲ್ಲು ಕ್ವಾರಿಯಲ್ಲಿ ಸ್ಫೋಟಗೊಂಡಿರುವ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

By

Published : Oct 16, 2020, 6:10 PM IST

Published : Oct 16, 2020, 6:10 PM IST

stone quarry
stone quarry

ರಾಯಗಢ(ಒಡಿಶಾ): ರಾಯಗಢ ಜಿಲ್ಲೆಯ ಗುನ್ನಾಪುರ ಪ್ರದೇಶದಲ್ಲಿರುವ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಕ್ವಾರಿಯಲ್ಲಿ ಕಲ್ಲು ಸ್ಫೋಟ ಮಾಡ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಉಳಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕ್ವಾರಿಯಲ್ಲಿ ಇವರು ಕೆಲಸ ಮಾಡ್ತಿದ್ದ ವೇಳೆ ಏಕಾಏಕಿ ಸ್ಫೋಟಗೊಂಡಿದ್ದು, ಗಾಯಗೊಂಡವರನ್ನ ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ABOUT THE AUTHOR

...view details