ಕರ್ನಾಟಕ

karnataka

ETV Bharat / bharat

ಭೀಕರ ಅಪಘಾತದಲ್ಲಿ ಹಾರಿ ಹೋದ ಕಾರಿನ ಟಾಪ್​​​: ಮೂವರ ದುರ್ಮರಣ - ಗಜ್ವೇಲ್​ ಅಪಘಾತ ಸುದ್ದಿ

ಭೀಕರ ರಸ್ತೆ ಅಪಘಾತದಲ್ಲಿ ಕಾರಿನ​ ಟಾಪ್​ ಹಾರಿ ಹೋಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮೂವರು

By

Published : Oct 22, 2019, 6:08 PM IST

ಸಿದ್ದಿಪೇಟ:ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಜ್ವೇಲ್​ನಲ್ಲಿ ನಡೆದಿದೆ.

ಕರೀಂನಗರ್​ ಜಿಲ್ಲೆಯ ವೇಗುರುಪಲ್ಲಿ ಗ್ರಾಮಕ್ಕೆ ಸೇರಿದ ಹಲವರು ಭಾನುವಾರ ಹೈದರಾಬಾದ್​ನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಬಂದಿದ್ದರು. ಬಳಿಕ ವಾಪಸಾಗುತ್ತಿದ್ದ ವೇಳೆ ಭಾನುವಾರ ಮಧ್ಯರಾತ್ರಿ 12:30ರ ಸುಮಾರಿಗೆ ಗಜ್ವೇಲ್​ ತಾಲೂಕಿನ ಪ್ರಜ್ಞಾಪುರ್​ ಶಿವಾರುನ ಹೈವೇಯಲ್ಲಿ ನಿಂತಿದ್ದ ಕಂಟೈನರ್​ಗೆ ಕಾರು ಡಿಕ್ಕಿ ಹೊಡೆದಿದೆ.

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮೂವರು

ಡಿಕ್ಕಿಯ ರಭಸಕ್ಕೆ ಕಾರಿನ ಟಾಪ್​ ಹಾರಿ ಹೋಗಿದ್ದು, ಕಾರಿನಲ್ಲಿದ್ದ ಮಲ್ಲೇಶಂ (48), ಅಲ್ಗುವೆಲ್ಲಿ ಜರ್ದಾನ್​ರೆಡ್ಡಿ (48), ಜಂಗ ಪ್ರಭಾಕರ್​ ರೆಡ್ಡಿ (58) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details