ಕೇರಳ:ಗರ್ಭಿಣಿ ಆನೆ ಹತ್ಯೆ ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಿರುವುದಾಗಿ ಕೇರಳ ಅರಣ್ಯ ಸಚಿವ ಕೆ ರಾಜು ತಿಳಿಸಿದ್ದಾರೆ.
ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ ಪ್ರಕರಣ: ಓರ್ವ ಆರೋಪಿ ಅರೆಸ್ಟ್
ಗರ್ಭಿಣಿ ಆನೆ ಹತ್ಯೆ ಪ್ರಕರಣ ಸಂಬಂಧ ನಿನ್ನೆಯಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ಓರ್ವ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಆತನನ್ನು ಬಂಧಿಸಿರುವುದಾಗಿ ಕೇರಳ ಅರಣ್ಯ ಸಚಿವ ಕೆ ರಾಜು ಹೇಳಿದ್ದಾರೆ.
![ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ ಪ್ರಕರಣ: ಓರ್ವ ಆರೋಪಿ ಅರೆಸ್ಟ್ pregnant elephant death case](https://etvbharatimages.akamaized.net/etvbharat/prod-images/768-512-7483964-thumbnail-3x2-megha.jpg)
ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ ಪ್ರಕರಣ
ಕೇರಳ ಅರಣ್ಯ ಸಚಿವ ಕೆ ರಾಜು
ನಿನ್ನೆಯಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ, ಇದೀಗ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಗರ್ಭಿಣಿ ಆನೆಗೆ ಕೆಲ ಕಿಡಿಗೇಡಿಗಳು ಪಟಾಕಿ ತುಂಬಿದ್ದ ಅನಾನಸ್ ನೀಡಿದ್ದರಿಂದ ಅದು ಸ್ಫೋಟಗೊಂಡು ನೀರಿನಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಮಲಪ್ಪುರಂನಲ್ಲಿ ಮೇ 29 ರಂದು ನಡೆದಿತ್ತು.
Last Updated : Jun 5, 2020, 11:24 AM IST