ಕರ್ನಾಟಕ

karnataka

By

Published : Nov 21, 2020, 10:59 AM IST

ETV Bharat / bharat

ಪಾಕ್​ ಸೇನೆಯಿಂದ ಅಪ್ರಚೋದಿತ ದಾಳಿ: ಭಾರತೀಯ ಯೋಧ ಹುತಾತ್ಮ

ಪಾಕಿಸ್ತಾನ ಸೈನ್ಯ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿ ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಓರ್ವ ಭಾರತೀಯ ಸೈನಿಕ ಹುತಾತ್ಮನಾಗಿದ್ದಾನೆ.

Jammu and Kashmir
ಓರ್ವ ಭಾರತೀಯ ಯೋಧ ಹುತಾತ್ಮ

ಜಮ್ಮುಕಾಶ್ಮೀರ: ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕ್​ ಸೇನೆ ಮತ್ತೆ ತನ್ನ ಉದ್ಧಟತನ ಮುಂದುವರೆಸಿದೆ.

ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಪಾಕಿಸ್ತಾನಿ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದಾನೆ. ಇನ್ನಷ್ಟೇ ಹೆಚ್ಚಿನ ಮಾಹಿತಿ ಬರಬೇಕಿದೆ.

ABOUT THE AUTHOR

...view details