ಕರ್ನಾಟಕ

karnataka

ETV Bharat / bharat

ಪಾಕಿಸ್ತಾನದಿಂದ ಶೆಲ್ ದಾಳಿ: ಒಬ್ಬ ನಾಗರಿಕ ಸಾವು! - ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ

ಮುಂಜಾನೆ 2 ಗಂಟೆ ಸುಮಾರಿಗೆ ಬಾಲಕೋಟೆ ಮತ್ತು ಮೆಂಧರ್ ವಲಯಗಳಲ್ಲಿನ ಎಲ್‌ಒಸಿ ಉದ್ದಕ್ಕೂ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ತೀವ್ರವಾದ ಶೆಲ್ ಧಾಳಿ ಮೂಲಕ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.

loc
loc

By

Published : Jul 8, 2020, 8:17 AM IST

ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ವೃದ್ಧ ನಾಗರಿಕರೊಬ್ಬರು ಮೃತಪಟ್ಟಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಮುಂಜಾನೆ 2 ಗಂಟೆ ಸುಮಾರಿಗೆ ಬಾಲಕೋಟೆ ಮತ್ತು ಮೆಂಧರ್ ವಲಯಗಳಲ್ಲಿನ ಎಲ್‌ಒಸಿ ಉದ್ದಕ್ಕೂ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ತೀವ್ರವಾದ ಶೆಲ್ ದಾಳಿ ಮೂಲಕ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.

ಭಾರತೀಯ ಸೇನೆಯು ಸೂಕ್ತವಾಗಿ ಪ್ರತೀಕಾರ ತೀರಿಸಿದೆ. ಇದು ಒಂದು ವಾರದೊಳಗೆ ಬಾಲಕೋಟೆ ವಲಯದಲ್ಲಿ ನಡೆದ ಎರಡನೇ ಕದನ ವಿರಾಮ ಉಲ್ಲಂಘನೆಯ ಘಟನೆಯಾಗಿದೆ.

ಪಾಕಿಸ್ತಾನ ಇದನ್ನು ಆಗಾಗ ಕದನ ವಿರಾಮ ಉಲ್ಲಂಘಿಸುತ್ತಿದೆ. ಭದ್ರತಾ ಸಂಸ್ಥೆಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳುವ ಭಯೋತ್ಪಾದಕರಿಗೆ ರಕ್ಷಣೆ ನೀಡಲು ಪಾಕಿಸ್ತಾನ ಗುಂಡಿನ ದಾಳಿಯನ್ನು ಬಳಸುತ್ತದೆ.

ABOUT THE AUTHOR

...view details