ಶ್ರೀನಗರ:ಉತ್ತರ ಕಾಶ್ಮೀರದ ಬಂಡೀಪುರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಓರ್ವ ಉಗ್ರಗಾಮಿಯನ್ನು ಹೊಡೆದುರುಳಿಸಿದೆ.
ಓರ್ವ ಉಗ್ರಗಾಮಿಯನ್ನ ಹೊಡೆದುರುಳಿಸಿದ ಭಾರತೀಯ ಸೇನೆ - ಉಗ್ರರ ಮೇಲೆ ಗುಂಡಿನ ದಾಳಿ
ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
![ಓರ್ವ ಉಗ್ರಗಾಮಿಯನ್ನ ಹೊಡೆದುರುಳಿಸಿದ ಭಾರತೀಯ ಸೇನೆ](https://etvbharatimages.akamaized.net/etvbharat/prod-images/768-512-5022716-thumbnail-3x2-brm.jpg)
ಉಗ್ರಗಾಮಿಯನ್ನ ಹೊಡೆದುರುಳಿಸಿದ ಭಾರತೀಯ ಸೇನೆ
ಉಗ್ರಗಾಮಿಗಳಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ಕಾರ್ಯಾಚರಣೆಗೆ ಇಳಿಯಿತು. ಈ ವೇಳೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಕಾಳಗ ನಡೆದಿದೆ. ಘಟನೆಯಲ್ಲಿನ ಓರ್ವ ಉಗ್ರನನ್ನ ಹೊಡೆದುರುಳಿಸಲಾಗಿದೆ.
ಶ್ರೀನಗರದಿಂದ 55 ಕಿ.ಮೀ. ದೂರದ ಲಾಡರ ಗ್ರಾಮದಲ್ಲಿ ಈಗಲೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.