ಕರ್ನಾಟಕ

karnataka

ETV Bharat / bharat

ಪಾಲ್ಘರ್​ ಗುಂಪು ಹತ್ಯೆಯಲ್ಲಿ ಭಾಗಿಯಾದ ಯಾರನ್ನೂ ಸುಮ್ನೆ ಬಿಡಲ್ಲ: ಉದ್ಧವ್ ಠಾಕ್ರೆ - ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಪಾಲ್ಘರ್ ಗುಂಪು ಹತ್ಯೆ ಸಂಬಂಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಹತ್ಯೆಗೈದ ಅಪರಾಧಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಈ ಘೋರ ಅಪರಾಧ ಮತ್ತು ನಾಚಿಕೆಗೇಡಿನ ಕೃತ್ಯದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸಲಾಗುವುದಿಲ್ಲ" ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

Palghar mob lynching: Culprits will be brought to justice, says CM Uddhav Thackeray
ಈ ಘೋರ ಅಪರಾಧದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸಲಾಗುವುದಿಲ್ಲ: ಉದ್ಧವ್ ಠಾಕ್ರೆ

By

Published : Apr 20, 2020, 12:07 PM IST

ಮುಂಬೈ(ಮಹಾರಾಷ್ಟ್ರ): ಪಾಲ್ಘರ್ ಜಿಲ್ಲೆಯಲ್ಲಿ ಮೂವರನ್ನು ಗುಂಪು ಹತ್ಯೆಗೈದ ಅಪರಾಧಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ರಾತ್ರಿ ಹೇಳಿದ್ದಾರೆ.

"ಪಾಲ್ಘರ್ ಘಟನೆಯನ್ನು ವಿರೋಧಿಸಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅಪರಾಧ ಬಡೆದ ದಿನದಂದು 2 ಸಾಧುಗಳು, ಒಬ್ಬ ಚಾಲಕ ಸೇರಿದಂತೆ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ ನಡೆದಿದೆ. ಸದ್ಯ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘೋರ ಅಪರಾಧ ಮತ್ತು ನಾಚಿಕೆಗೇಡಿನ ಕೃತ್ಯದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸಲಾಗುವುದಿಲ್ಲ" ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಇನ್ನೂ, ಘಟನೆ ಕುರಿತು ರಾಜ್ಯ ಗೃಹ ಸಚಿವ ಅನಿಲ್ ದೇಶ್​ ಮುಖ್​ ಈಗಾಗಲೇ ಉನ್ನತ ಮಟ್ಟದ ತನಿಖೆಯನ್ನು ಘೋಷಿಸಿದ್ದಾರೆ.

ಘಟನೆಯ ಹಿನ್ನೆಲೆ:

ಏಪ್ರಿಲ್ 16 ರ ರಾತ್ರಿ ಮುಂಬೈನ ಕಂಡೀವಲಿಯ ಮೂವರು ಪುರುಷರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ಸೂರತ್ ಕಡೆಗೆ ತೆರಳುತ್ತಿದ್ದಾಗ ಗುಂಪೊಂದು ಅವರನ್ನು ಕಳ್ಳರೆಂದು ಅನುಮಾನಿಸಿ ಥಳಿಸಿ ಕೊಂದಿತ್ತು.

ABOUT THE AUTHOR

...view details