ಕರ್ನಾಟಕ

karnataka

ETV Bharat / bharat

ರಾಜಕೀಯ ಸಮರಕ್ಕೆ ಪವರ್​ ಸ್ಟಾರ್​: ಗಜವಾಕಾ,ಭೀಮಾವರಂ ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಕೆ

ಆಂಧ್ರಪ್ರದೇಶ ರಾಜಕೀಯಕ್ಕೆ ತೆಲಗು ಪವರ್​ ಸ್ಟಾರ್​ ಪವನ್​ ಕಲ್ಯಾಣ್​ ಅಧಿಕೃತವಾಗಿ ಎಂಟ್ರಿ ನೀಡಿದ್ದಾರೆ. ಎರಡು ವಿಧಾನಸಭೆ ಕ್ಷೇತ್ರಗಳಿಗೆ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

By

Published : Mar 21, 2019, 11:33 PM IST

ಪವನ್​ ಕಲ್ಯಾಣ ನಾಮಪತ್ರ ಸಲ್ಲಿಕೆ

ವಿಶಾಖಪಟ್ಟಣಂ: ಜನಸೇನಾ ಪಕ್ಷದ ಮುಖ್ಯಸ್ಥ, ತೆಲಗು ನಟ ಪವನ್ ಕಲ್ಯಾಣ್​ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಿದ್ದಾರೆ. ಈಗಾಗಲೇ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ವಿಶಾಖ್ ಪಟ್ಟಣಂ ಜಿಲ್ಲೆಯ ಗಜುವಾಕಾ ಹಾಗೂ ಪಶ್ಚಿಮ ಗೋದಾವರಿಯಲ್ಲಿನ ಭೀಮಾವರಂ ವಿಧಾನಸಭೆ ಕ್ಷೇತ್ರದಿಂದ ತಮ್ಮ ರಾಜಕೀಯ ಜೀವನ ಆರಂಭಿಸಲು ನಿರ್ಧರಿಸಿದ್ದಾರೆ. ಈಗಾಗಲೇ ಲೋಕಸಭೆ ಚುನಾವಣೆಗಾಗಿ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ,ಸಿಪಿಐ ಮತ್ತು ಸಿಪಿಐ (ಎಂ) ಜತೆ ಮೈತ್ರಿ ಮಾಡಿಕೊಂಡಿದ್ದಾರೆ.

ಆಂಧ್ರಪ್ರದೇಶದ ಒಟ್ಟು 175 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಎಸ್ಪಿ,ಏಳು ಕ್ಷೇತ್ರಗಳಲ್ಲಿ ಸಿಪಿಐ ಮತ್ತು ಸಿಪಿಎಂ ಪಕ್ಷಗಳು ಸ್ಪರ್ಧಿಸುತ್ತಿದ್ದು, ಉಳಿದ 140 ಕ್ಷೇತ್ರಗಳಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಸ್ಪರ್ಧೆ ಮಾಡುತ್ತಿದೆ. ಜತೆಗೆ 18 ಲೋಕಸಭಾ ಕ್ಷೇತ್ರಗಳಲ್ಲೂ ಫೈಟ್​ ಮಾಡಲಿದೆ. ಇನ್ನು ಆಂಧ್ರದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಯುತ್ತಿದ್ದು, ಏಪ್ರಿಲ್​ 11ರಂದು ಮತದಾನ ನಡೆಯಲಿದೆ.

ABOUT THE AUTHOR

...view details