ನವದೆಹಲಿ: ಸರಿಯಾದ ಸಮಯದಲ್ಲಿ ತೆಗೆದುಕೊಂಡಿರುವ ಸರಿಯಾದ ನಿರ್ಧಾರಗಳಿಂದ ಇದೀಗ ಕೋವಿಡ್ ವಿರುದ್ಧದ ಹೋರಾಟದಲ್ಲಿ ನಾವು ಉತ್ತಮ ಸ್ಥಿತಿಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಉತ್ತರಪ್ರದೇಶದ ನೋಯ್ಡಾ, ಕೋಲ್ಕತಾ, ಮತ್ತು ಮುಂಬೈನಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮೂರು ಹೊಸ ಹೈ-ಥ್ರೂಪುಟ್ ಲ್ಯಾಬ್ಗಳನ್ನು ಉದ್ಘಾಟಿಸಿ ಪ್ರಧಾನಿ ಮೋದಿ ಮಾತನಾಡಿದರು.
ಸರಿಯಾದ ನಿರ್ಧಾರಗಳಿಂದ ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಉತ್ತಮ ಸ್ಥಿತಿ:ಪ್ರಧಾನಿ ಮೋದಿ - ಐಸಿಎಂಆರ್
ಸಾಮಾಜಿಕ ಅಂತರ, ಮಾಸ್ಕ್ ಹಾಕಿಕೊಳ್ಳುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವುದರಿಂದ ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ನಾವು ಗೆಲುವು ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ಪಟ್ಟರು.
ವಿವಿಧ ದೇಶಗಳಿಗೆ ಹೋಲಿಕೆ ಮಾಡಿದಾಗ ಭಾರತದಲ್ಲಿ ಮಹಾಮಾರಿ ಕೋವಿಡ್ನಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ತೀರಾ ಕಡಿಮೆಯಾಗಿದ್ದು, ಗುಣಮುಖರಾಗುತ್ತಿರುವ ಸಂಖ್ಯೆಯಲ್ಲೂ ಏರಿಕೆ ಕಂಡು ಬಂದಿದೆ ಎಂದು ತಿಳಿಸಿದ್ದರು. ಆರಂಭದಲ್ಲಿ ನಾವು ವೈದ್ಯಕೀಯ ಮೂಲ ಸೌಂಕರ್ಯಗಳಿಂದ ವಂಚಿತರಾಗಿದ್ದೇವು. ಆದರೆ ಇದೀಗ ದೇಶಾದ್ಯಂತ 11 ಸಾವಿರಕ್ಕೂ ಅಧಿಕ ಕೋವಿಡ್ ಚಿಕಿತ್ಸಾ ಸೆಂಟರ್ಗಳು, 11 ಲಕ್ಷಕ್ಕೂ ಅಧಿಕ ಐಸೋಲೇಷನ್ ಬೆಡ್ ಹಾಗೂ ಪ್ರತಿದಿನ 5 ಲಕ್ಷ ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ ಎಂದು ತಿಳಿಸಿದರು. ದೇಶದ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸರಿಯಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಕೆಯಿಂದ ಇದರ ವಿರುದ್ಧದ ಹೋರಾಟದಲ್ಲಿ ನಾವು ಗೆಲುವು ಸಾಧಿಸಬಹುದಾಗಿದೆ ಎಂದು ತಿಳಿಸಿದರು.
ಈ ಲ್ಯಾಬ್ಗಳಲ್ಲಿ ಪ್ರತಿ ದಿನ 10 ಸಾವಿರಕ್ಕೂ ಅಧಿಕ ಕೋವಿಡ್ ಟೆಸ್ಟ್ ನಡೆಸುವ ಸಾಮರ್ಥ್ಯ ಹೊಂದಿದ್ದು, ಇಲ್ಲಿನ ಜನರಿಗೆ ಅನುಕೂಲವಾಗಲಿದೆ ಎಂದರು. ಇದರ ಜತೆಗೆ ಲ್ಯಾಬ್ಗಳು ಕೇವಲ ಕೊರೊನಾ ಮಾತ್ರವಲ್ಲದೇ ಹೆಚ್ಐವಿ, ಡೆಂಗ್ಯೂ ಸೇರಿದಂತೆ ಅನೇಕ ರೋಗದ ಟೆಸ್ಟ್ಗಳು ನಡೆಸಲು ಮುಂದಿನ ದಿನಗಳಲ್ಲಿ ಸಹಕಾರಿಯಾಗಲಿವೆ ಎಂದು ಅವರು ಮಾಹಿತಿ ನೀಡಿದರು.