ಕರ್ನಾಟಕ

karnataka

By

Published : Oct 11, 2020, 12:52 PM IST

ETV Bharat / bharat

ಸ್ವಾಮಿತ್ವ ಯೋಜನೆಗೆ ಪಿಎಂ ಮೋದಿ ಚಾಲನೆ: ಆಸ್ತಿ ಕಾರ್ಡ್‌ಗಳ ಭೌತಿಕ ವಿತರಣೆ ಆರಂಭ

ಪ್ರಾಪರ್ಟಿ ಕಾರ್ಡ್​ಗಳನ್ನು ವಿತರಿಸುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದ್ದಾರೆ.

ಸ್ವಾಮಿತ್ವ ಯೋಜನೆಗೆ ಪಿಎಂ ಮೋದಿ ಚಾಲನೆ
ಸ್ವಾಮಿತ್ವ ಯೋಜನೆಗೆ ಪಿಎಂ ಮೋದಿ ಚಾಲನೆ

ನವದೆಹಲಿ: ಪ್ರಾಪರ್ಟಿ ಕಾರ್ಡ್​ಗಳನ್ನು ವಿತರಿಸುವ ಸ್ವಾಮಿತ್ವ ಯೋಜನೆಗೆ ಪಿಎಂ ನರೇಂದ್ರ ಮೋದಿ ವಿಡಿಯೋ ಕಾನ್ಫ್​ರೆನ್ಸ್​ ಮೂಲಕ ಚಾಲನೆ ನೀಡಿದರು.

ಗ್ರಾಮಗಳ ಸಮೀಕ್ಷೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ನಕ್ಷೆ (ಸಾಮಿತ್ವ) ಯೋಜನೆಯಡಿ ಆಸ್ತಿ ಕಾರ್ಡ್‌ಗಳ ಭೌತಿಕ ವಿತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದರು.

ಈ ಕಾರ್ಡ್​ಗಳು ಹಳ್ಳಿಗಳಲ್ಲಿ ವಾಸಿಸುವ ಜನರು ಮತ್ತು ಅವರು ಹೊಂದಿರುವ ಸುತ್ತಮುತ್ತಲಿನ ಪ್ರದೇಶಗಳ ಆಸ್ತಿಯ ಹಕ್ಕುಪತ್ರಗಳ ಭೌತಿಕ ಪ್ರತಿಗಳಾಗುತ್ತವೆ. ಏಪ್ರಿಲ್​ನಲ್ಲಿ ಈ ಸ್ವಾಮಿತ್ವ ಯೋಜನೆಯನ್ನು ಆರಂಭಿಸಲಾಯಿತು. ಇದು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರು ತಮ್ಮ ಆಸ್ತಿಯನ್ನು ಆರ್ಥಿಕ ಆಸ್ತಿಯಾಗಿ ಬಳಸಲು ಅವಕಾಶ ಒದಗಿಸುತ್ತದೆ. ಈ ಯೋಜನೆಯಿಂದ 6.62 ಲಕ್ಷ ಗ್ರಾಮಗಳಿಗೆ ಲಾಭವಾಗಲಿದ್ದು, ರೈತರ ಜಮೀನುಗಳು ಸಂಪೂರ್ಣ ಡಿಜಿಟಲೀಕರಣಗೊಳ್ಳಲಿವೆ.

ಸ್ವಾಮಿತ್ವ ಯೋಜನೆಯು ಉತ್ತರಪ್ರದೇಶದ 346, ಹರಿಯಾಣದ 221, ಮಹಾರಾಷ್ಟ್ರದ 100, ಮಧ್ಯಪ್ರದೇಶದ 44, ಉತ್ತರಾಖಂಡದ 50 ಮತ್ತು ಕರ್ನಾಟಕದ 2 ಗ್ರಾಮಗಳನ್ನು ಒಳಗೊಂಡಿದೆ. ಈ ಪ್ರದೇಶಗಳಲ್ಲಿ ವಾಸಿಸುವ ಸುಮಾರು 763 ಫಲಾನುಭವಿಗಳು ಯೋಜನೆಯ ಲಾಭವನ್ನು ಪಡೆಯಲಿದ್ದಾರೆ.

ಮಹಾರಾಷ್ಟ್ರ ರಾಜ್ಯವನ್ನು ಹೊರತುಪಡಿಸಿ ಉಳಿದ ರಾಜ್ಯಗಳ ಫಲಾನುಭವಿಗಳಿಗೆ ಒಂದೇ ದಿನದಲ್ಲಿ ಆಸ್ತಿ ಕಾರ್ಡ್​ಗಳ ಭೌತಿಕ ಪ್ರತಿಗಳು ಲಭ್ಯವಾಗಲಿವೆ. ಪ್ರಾಪರ್ಟಿ ಕಾರ್ಡ್​ನ ವೆಚ್ಚವನ್ನು ಮರುಪಡೆಯುವ ವ್ಯವಸ್ಥೆಯನ್ನು ಮಹಾರಾಷ್ಟ್ರ ಸರ್ಕಾರ ಹೊಂದಿದೆ. ಈ ಹಿನ್ನೆಲೆ ಅದು ಪ್ರಾಪರ್ಟಿ ಕಾರ್ಡ್​ಗಳ ವಿತರಣೆಗೆ ಒಂದು ತಿಂಗಳ ಕಾಲಾವಕಾಶ ತೆಗೆದುಕೊಂಡಿದೆ.

ಸಾಲ ಮತ್ತು ಇತರ ಹಣಕಾಸಿನ ಪ್ರಯೋಜನಗಳನ್ನು ತೆಗೆದುಕೊಳ್ಳಲು ಗ್ರಾಮಸ್ಥರು ಈ ಆಸ್ತಿಯನ್ನು ಆರ್ಥಿಕ ಆಸ್ತಿಯಾಗಿ ಬಳಸಲು ಪ್ರಾಪರ್ಟಿ ಕಾರ್ಡ್​ ದಾರಿ ಮಾಡಿಕೊಡುತ್ತದೆ. ಗ್ರಾಮೀಣ ಪ್ರದೇಶದಲ್ಲಿರುವ ಮನೆ ಮಾಲೀಕರಿಗೆ 'ಹಕ್ಕುಗಳ ದಾಖಲೆ' ಒದಗಿಸುವುದು ಮತ್ತು ಆಸ್ತಿ ಕಾರ್ಡ್‌ಗಳನ್ನು ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಯೋಜನೆಯನ್ನು ನಾಲ್ಕು ವರ್ಷಗಳ (2020-2024) ಅವಧಿಯಲ್ಲಿ ಹಂತಹಂತವಾಗಿ ದೇಶಾದ್ಯಂತ ಜಾರಿಗೆ ತರಲಾಗುತ್ತಿದ್ದು, ಅಂತಿಮವಾಗಿ ದೇಶದ ಸುಮಾರು 6.62 ಲಕ್ಷ ಗ್ರಾಮಗಳಿಗೆ ತಲುಪುವ ಉದ್ದೇಶ ಹೊಂದಿದೆ.

ABOUT THE AUTHOR

...view details