ನವದೆಹಲಿ:ಭಾರತ-ಚೀನಾ ಗಡಿ ಪ್ರದೇಶದಲ್ಲಿ ನಡೆದ ಸಂಘರ್ಷದ ವಿಚಾರವಾಗಿ ನಿನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ್ದ ಮೋದಿ, ಭಾರತದ ಯಾವುದೇ ಭಾಗವನ್ನು ಚೀನಾ ಅತಿಕ್ರಮಣ ಮಾಡಿಕೊಂಡಿಲ್ಲ, ಇದಕ್ಕೆ ಅವಕಾಶವನ್ನೂ ನೀಡುವುದಿಲ್ಲ ಎಂದು ಹೇಳಿದ್ದರು.
ಚೀನಾ ಸೈನಿಕರು ಭಾರತದ ಗಡಿ ಪ್ರವೇಶ ಮಾಡಿಲ್ಲವೆಂದರೆ ಭಾರತದ 20 ಯೋಧರು ಹುತಾತ್ಮರಾಗಿದ್ದು ಹೇಗೆ? ಎಂಬ ಪ್ರಶ್ನೆ ಉದ್ಭವವಾಗಿತ್ತು. ಹೀಗಾಗಿ ಪ್ರಧಾನಿ ಹೇಳಿಕೆಗೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.