ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ಕೋವಿಡ್ ಸಂಬಂಧ ಎಲ್ಲ ರಾಜ್ಯದ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ವೇಳೆ ಮಾಹಿತಿ ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೊರೊನಾ ಮೂರನೇ ಅಲೆ ಆರಂಭವಾಗಿದ್ದು, ಇದಕ್ಕೆ ಹಲವು ಕಾರಣಗಳಿವೆ ಅದರಲ್ಲಿ ವಾಯುಮಾಲಿನ್ಯ ಪ್ರಮುಖ ಕಾರಣ ಎಂದರು.
ನವೆಂಬರ್ 10 ರಂದು ದೆಹಲಿಯಲ್ಲಿ 8,600 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಅದೇ ಹೆಚ್ಚಿನ ಸಂಖ್ಯೆಯಾಗಿದೆ. ಅಂದಿನಿಂದ ಇಂದಿನವರೆಗೆ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದು ಕೇಜ್ರಿವಾಲ್ ಪ್ರಧಾನ ಮಂತ್ರಿಗೆ ತಿಳಿಸಿದರು.