ಕರ್ನಾಟಕ

karnataka

By

Published : Apr 4, 2019, 9:59 PM IST

ETV Bharat / bharat

ಮೋದಿ ಪರ ರಾಜಸ್ಥಾನ ರಾಜ್ಯಪಾಲರ ಪ್ರಚಾರ: ರಾಷ್ಟ್ರಪತಿಗಳು ಕೆಂಡಾಮಂಡಲ

ಮೋದಿ ಪರ ಪ್ರಚಾರ ಮಾಡಿದ ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ವಿರುದ್ಧ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಗರಂ ಆಗಿದ್ದಾರೆ.

ಮೋದಿ ಪರ ಪ್ರಚಾರ ಮಾಡಿದ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿ ಗರಂ

ನವದೆಹಲಿ: ಪ್ರಧಾನಿ ಮೋದಿ ಪರ ಪ್ರಚಾರ ಮಾಡಿದ ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಚುನಾವಣಾ ಆಯೋಗದ ಮೂಲಕ ಕೇಂದ್ರ ಗೃಹ ಸಚಿವರಿಗೆ ಪತ್ರ ರವಾನಿಸಿದ್ದಾರೆ. ಸಾಂವಿಧಾನಿಕ ಹುದ್ದೆಯ ನಿಯಮ ಉಲ್ಲಂಘಿಸಿರುವುದಕ್ಕೆ ಕ್ರಮ ಕೈಗೊಳ್ಳುವಂತೆಯೂ ಅವರು ಸೂಚಿಸಿದ್ದಾರೆ.

ವಿದೇಶಿ ಪ್ರವಾಸಕ್ಕೆ ತೆರಳಿದ್ದ ರಾಷ್ಟ್ರಪತಿಗಳು, ಭಾರತಕ್ಕೆ ಹಿಂದಿರುಗಿದ ಕೂಡಲೇ ಈ ಬಗ್ಗೆ ಸೂಚನೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ಚುನಾವಣಾ ಆಯೋಗ ಈ ದೋಷಾರೋಪಣೆ ಸಲ್ಲಿಸಿರುವುದು ತೀರ ಅಪರೂಪ ಹಾಗೂ ಗಂಭೀರವಾದುದು ಎನ್ನಾಲಾಗ್ತಿದೆ.

ಚುನಾವಣಾ ನೀತಿ ಸಂಹಿತೆ ರಾಜ್ಯಪಾಲರಂತಹ ಸಾಂವಿಧಾನಿಕ ಸಂಸ್ಥೆಗಳಿಗೆ ಅನ್ವಯಿಸಲ್ಲ ಎನ್ನಲಾಗುತ್ತಿದೆ. ಆದರೂ, ಯಾವುದೇ ಸಾಂವಿಧಾನಿಕ ಹುದ್ದೆಗಳಲ್ಲಿದ್ದವರು ಪ್ರಚಾರ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಹೇಳಿದೆ. ಅಲ್ಲದೆ, ಈ ಕಾರಣಕ್ಕಾಗಿ ರಾಜ್ಯಪಾಲರನ್ನು ಚುನಾವಣೆ ಪ್ರಕ್ರಿಯೆಯಿಂದ ಹೊರಗಿಡಬೇಕೆ ಎಂಬ ನಿರ್ಧಾರ ಪ್ರಧಾನಮಂತ್ರಿ ಅವರದ್ದಾಗಿರುತ್ತದೆ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು, ದೇಶದ ಒಳಿತಿಗಾಗಿ ಪ್ರಧಾನಿ ಮೋದಿ ಅವರನ್ನೇ ಮತ್ತೊಮ್ಮೆ ಚುನಾಯಿಸಿ ಎಂದು ಆಲಿಘರ್​​ನಲ್ಲಿ ಹೇಳಿದ್ದರು.


ABOUT THE AUTHOR

...view details