ನವದೆಹಲಿ:ಉತ್ತರ ಪ್ರದೇಶದ ಯೋಗಿ ಆದಿತ್ಯನಾತ್ ಸರ್ಕಾರ ತನ್ನ ಹದ್ದು ಮೀರಿ ವರ್ತಿಸುತ್ತಿದೆ ಹಾಗೂ ಅಭದ್ರತೆಯ ಭೀತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಲಾಗಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಯೋಗಿ ಸರ್ಕಾರಕ್ಕೆ ಅಭದ್ರತೆ ಭೀತಿಯಿಂದ ಪ್ರಿಯಾಂಕಾ ಗಾಂಧಿ ಬಂಧನ: ರಾಹುಲ್ ವಾಗ್ದಾಳಿ -
ಸೋನಭದ್ರಾ ಜಿಲ್ಲೆಯಲ್ಲಿ ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಡೆದ ಪೊಲೀಸ್ ಗೋಲಿಬಾರ್ನಲ್ಲಿ ಗಾಯಗೊಂಡವರ ಭೇಟಿಗೆ ತೆರೆಳುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದ ಪೊಲೀಸರು ವಾರಣಾಸಿಯ ನಾರಾಯಣ್ಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಸಾಂದರ್ಭಿಕ ಚಿತ್ರ
ಸೋನಭದ್ರಾ ಜಿಲ್ಲೆಯಲ್ಲಿ ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಡೆದ ಪೊಲೀಸ್ ಗೋಲಿಬಾರ್ನಲ್ಲಿ ಗಾಯಗೊಂಡವರ ಭೇಟಿಗೆ ತೆರೆಳುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದ ಪೊಲೀಸರು ವಾರಣಾಸಿಯ ನಾರಾಯಣ್ಪುರದಲ್ಲಿ ಬಂಧಿಸಿದ್ದಾರೆ.
ತಮ್ಮ ಭೂಮಿ ನೀಡಲು ನಿರಾಕರಿಸಿದ 10 ಆದಿವಾಸಿ ರೈತರು ಮೇಲೆ ಗುಂಡು ಹಾರಿಸಿರುವುದನ್ನು ನೋಡಿದರೆ ಉತ್ತರ ಪ್ರದೇಶದಲ್ಲಿನ ಬಿಜೆಪಿ ಸರ್ಕಾರಕ್ಕೆ ಅಭದ್ರತೆ ಭಯ ಕಾಡುತ್ತಿದೆ ಎಂಬುದನ್ನು ಸ್ಪಷ್ಟವಾಗಿದೆ ಎಂದು ರಾಹುಲ್ ಗಾಂಧಿ ಟ್ವಿಟ್ಟರ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.