ಶ್ರೀನಗರ (ಜಮ್ಮು ಕಾಶ್ಮೀರ ) : "ಅವರು ಒಂದೇ ಒಂದು ಪ್ರಕರಣವನ್ನು ಸಾಬೀತುಪಡಿಸಲಿ, ಅದರ ಪರಿಣಾಮಗಳನ್ನು ಎದುರಿಸಲು ನಾನು ಸಿದ್ಧಳಿದ್ದೇನೆ" ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಎನ್ಐಎ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವ ಪ್ರಕರಣಗಳ ಕುರಿತು ಪ್ರತಿಕ್ರಿಯಿಸಿದ್ದಾರೆ.
ತನಿಖಾ ಸಂಸ್ಥೆಗಳು ನನ್ನ ತಂದೆ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಮಾಧಿಯ ಮೇಲೆ "ಲೆಕ್ಕಪರಿಶೋಧನೆ" ನಡೆಸುತ್ತಿರುವುದು ಖೇದಕರ. ತನಿಖಾ ಸಂಸ್ಥೆಗಳು ಕಳೆದ ಎರಡು ವರ್ಷಗಳಿಂದ ನನ್ನ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸುತ್ತಿದ್ದರೂ, ಇದುವರೆಗೂ ಏನೂ ಸಿಕ್ಕಿಲ್ಲ ಎಂದು ಪಿಡಿಪಿ ಯುವ ವಿಭಾಗದ ನಾಯಕ ವಹೀದ್ ಪರ್ರಾನನ್ನು ಎನ್ಐಎ ಬಂಧಿಸಿದ ನಂತರ ಮುಫ್ತಿ ತನ್ನ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.