ನವದೆಹಲಿ:ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಕೆಲವೊಂದು ರಾಜ್ಯಗಳಲ್ಲಿ ಹೊತ್ತಿಕೊಂಡಿರುವ ಕಿಚ್ಚು ಇಲ್ಲಿಯವರೆಗೂ ಆರಿಲ್ಲ. ಈ ಮಸೂದೆ ವಿರೋಧಿಸಿ ಪ್ರತಿದಿನ ಪ್ರತಿಭಟನೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಅದರ ತೀವ್ರತೆ ಜಾಸ್ತಿಯಾಗ್ತಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ದುರದೃಷ್ಟಕರ ಮತ್ತು ತೀವ್ರ ದುಃಖಕರ ಎಂದು ಪ್ರಧಾನಿ ಮೋದಿ ಸರಣಿ ಟ್ವೀಟ್ ಮಾಡಿದ್ದಾರೆ.
ಮಸೂದೆ ಮೇಲೆ ಚರ್ಚೆ ಮತ್ತು ಭಿನ್ನಾಭಿಪ್ರಾಯ ನಡೆಸುವ ಅಗತ್ಯವಿದೆ. ಅದು ಪ್ರಜಾಪ್ರಭುತ್ವದ ಭಾಗಗಳಲ್ಲಿ ಒಂದು. ಅದನ್ನು ಬಿಟ್ಟು ಎಂದಿಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಮತ್ತು ಸಾಮಾನ್ಯರ ಜೀವನಕ್ಕೆ ತೊಂದರೆ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳ,ಅಸ್ಸೋಂ, ಹೈದರಾಬಾದ್ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.