ಕರ್ನಾಟಕ

karnataka

ಪಂಜಾಬ್​ ಪೊಲೀಸರ ಕಾರ್ಯಾಚರಣೆ: ಇಬ್ಬರು ದರೋಡೆಕೋರರ ಬಂಧನ

ಪಂಜಾಬ್​ನ ತಾರ್ನ್ ತರಣ್ ಜಿಲ್ಲೆಯಲ್ಲಿ ಕಳ್ಳತನ ಎಸಗುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

By

Published : Jan 18, 2021, 1:55 PM IST

Published : Jan 18, 2021, 1:55 PM IST

Punjab
ಪೊಲೀಸರ ಕಾರ್ಯಾಚರಣೆ

ಪಂಜಾಬ್​: ರಾಜ್ಯದ ತಾರ್ನ್ ತರಣ್ ಜಿಲ್ಲೆಯ ಅನೇಕ ಭಾಗಗಳಲ್ಲಿ ದರೋಡೆ ಮಾಡುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

ದರೋಡೆಕೋರರನ್ನು ಬಂಧಿಸಲು ಪೊಲೀಸರು ತೆರಳಿದಾಗ ಅಲ್ಲಿನ ಮದುವೆ ಹಾಲ್​ನೊಳಗೆ ಇಬ್ಬರು ಖದೀಮರು ನುಗ್ಗಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಇಬ್ಬರನ್ನು ಬಂಧಿಸಲಾಗಿದೆ.

ಇನ್ನು ಈ ವೇಳೆ, ಪೊಲೀಸರು ಮತ್ತು ಖದೀಮರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಗಾಯಗೊಂಡಿದ್ದಾನೆ. ಮತ್ತೋರ್ವ ಪೊಲೀಸ್ ಕಾನ್​ಸ್ಟೇಬಲ್​ ಸರಬ್ಜಿತ್ ಸಿಂಗ್​ಗೂ ಕಾರ್ಯಾಚರಣೆ ವೇಳೆ ಗುಂಡೇಟು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details