ಹಥ್ರಾಸ್ (ಉತ್ತರ ಪ್ರದೇಶ):ಬಹಳಷ್ಟು ಹೈಡ್ರಾಮಾ ಬಳಿಕ ಕೊನೆಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಹಥ್ರಾಸ್ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿರುವ ಸಂತ್ರಸ್ತೆಯ ಕುಟುಂಬದ ಸದಸ್ಯರ ಭೇಟಿ ಮಾಡಿದ್ದು, ಅವರಿಗೆ ಸಾಂತ್ವನ ಹೇಳಿದ್ದಾರೆ.
ಹಥ್ರಾಸ್ ಸಂತ್ರಸ್ತೆ ಕುಟುಂಬ ಭೇಟಿ ಮಾಡಿದ ರಾಹುಲ್ - ಪ್ರಿಯಾಂಕಾ: ನ್ಯಾಯ ದೊರೆಯುವ ತನಕ ಹೋರಾಟ ಎಂದ ವಾದ್ರಾ! - ಹಥ್ರಾಸ್ ರೇಪ್ ಕೇಸ್
ಹಥ್ರಾಸ್ ಸಂತ್ರಸ್ತೆ ಕುಟುಂಬದವರನ್ನ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿಯಾಗಿ ಸಾಂತ್ವನ ಹೇಳಿದ್ದು, ಕುಟುಂಬಕ್ಕೆ ನ್ಯಾಯ ದೊರೆಯುವ ತನಕ ನಾವು ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ.
![ಹಥ್ರಾಸ್ ಸಂತ್ರಸ್ತೆ ಕುಟುಂಬ ಭೇಟಿ ಮಾಡಿದ ರಾಹುಲ್ - ಪ್ರಿಯಾಂಕಾ: ನ್ಯಾಯ ದೊರೆಯುವ ತನಕ ಹೋರಾಟ ಎಂದ ವಾದ್ರಾ! rahul and priyanka reached hathras](https://etvbharatimages.akamaized.net/etvbharat/prod-images/768-512-9039613-thumbnail-3x2-wdfdfd.jpg)
20 ವರ್ಷದ ದಲಿತ ಯುವತಿ ಹಥ್ರಾಸ್ನಲ್ಲಿ ಅತ್ಯಾಚಾರಕ್ಕೊಳಗಾಗಿ ಕಳೆದ ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದಳು. ಈ ಪ್ರಕರಣ ರಾಷ್ಟ್ರದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಎರಡು ದಿನಗಳ ಹಿಂದೆ ಪ್ರಯತ್ನಿಸಿ ವಿಫಲರಾಗಿದ್ದರು. ಆದರೆ, ಇಂದು ಉತ್ತರ ಪ್ರದೇಶ ಸರ್ಕಾರ ಕೇವಲ ಐವರಿಗೆ ಭೇಟಿ ಮಾಡಲು ಅವಕಾಶ ನೀಡಿದ್ದರು.
ಅದರಂತೆ ರಾಹುಲ್, ಪ್ರಿಯಾಂಕಾ ಸೇರಿ ಕಾಂಗ್ರೆಸ್ನ ಐವರು ಮುಖಂಡರು ಸಂತ್ರಸ್ತೆ ಕುಟುಂಬ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಸಂತ್ರಸ್ತೆ ಕುಟುಂಬ ಭೇಟಿಯಾದ ಬಳಿಕ ಮಾತನಾಡಿರುವ ಪ್ರಿಯಾಂಕಾ ಗಾಂಧಿ, ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿರುವ ಸಂತ್ರಸ್ತ ಯುವತಿ ಮೃತದೇಹವನ್ನ ಕೊನೆಯ ಬಾರಿ ನೋಡಲು ಕುಟುಂಬಸ್ಥರಿಗೆ ಅವಕಾಶ ನೀಡಿಲ್ಲ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಜವಾಬ್ದಾರಿ ಅರ್ಥ ಮಾಡಿಕೊಳ್ಳಬೇಕು. ನ್ಯಾಯ ದೊರೆಯುವ ತನಕ ನಾವು ಈ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.