ಕರ್ನಾಟಕ

karnataka

By

Published : Oct 3, 2020, 8:51 PM IST

Updated : Oct 3, 2020, 10:59 PM IST

ETV Bharat / bharat

ಹಥ್ರಾಸ್​ ಸಂತ್ರಸ್ತೆ ಕುಟುಂಬ ಭೇಟಿ ಮಾಡಿದ ರಾಹುಲ್​ - ಪ್ರಿಯಾಂಕಾ: ನ್ಯಾಯ ದೊರೆಯುವ ತನಕ ಹೋರಾಟ ಎಂದ ವಾದ್ರಾ!

ಹಥ್ರಾಸ್​ ಸಂತ್ರಸ್ತೆ ಕುಟುಂಬದವರನ್ನ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿಯಾಗಿ ಸಾಂತ್ವನ ಹೇಳಿದ್ದು, ಕುಟುಂಬಕ್ಕೆ ನ್ಯಾಯ ದೊರೆಯುವ ತನಕ ನಾವು ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ.

rahul and priyanka reached hathras
rahul and priyanka reached hathras

ಹಥ್ರಾಸ್ (ಉತ್ತರ ಪ್ರದೇಶ)​:ಬಹಳಷ್ಟು ಹೈಡ್ರಾಮಾ ಬಳಿಕ ಕೊನೆಗೂ ರಾಹುಲ್​ ಗಾಂಧಿ, ಪ್ರಿಯಾಂಕಾ ಹಥ್ರಾಸ್ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿರುವ​ ಸಂತ್ರಸ್ತೆಯ ಕುಟುಂಬದ ಸದಸ್ಯರ ಭೇಟಿ ಮಾಡಿದ್ದು, ಅವರಿಗೆ ಸಾಂತ್ವನ ಹೇಳಿದ್ದಾರೆ.

ಹಥ್ರಾಸ್​ ಸಂತ್ರಸ್ತೆ ಕುಟುಂಬ ಭೇಟಿ ಮಾಡಿದ ರಾಹುಲ್​ - ಪ್ರಿಯಾಂಕಾ

20 ವರ್ಷದ ದಲಿತ ಯುವತಿ ಹಥ್ರಾಸ್​​ನಲ್ಲಿ ಅತ್ಯಾಚಾರಕ್ಕೊಳಗಾಗಿ ಕಳೆದ ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದಳು. ಈ ಪ್ರಕರಣ ರಾಷ್ಟ್ರದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಎರಡು ದಿನಗಳ ಹಿಂದೆ ಪ್ರಯತ್ನಿಸಿ ವಿಫಲರಾಗಿದ್ದರು. ಆದರೆ, ಇಂದು ಉತ್ತರ ಪ್ರದೇಶ ಸರ್ಕಾರ ಕೇವಲ ಐವರಿಗೆ ಭೇಟಿ ಮಾಡಲು ಅವಕಾಶ ನೀಡಿದ್ದರು.

ಹಥ್ರಾಸ್​ ಸಂತ್ರಸ್ತೆ ಕುಟುಂಬ ಭೇಟಿ ಮಾಡಿದ ರಾಹುಲ್​-ಪ್ರಿಯಾಂಕಾ!

ಅದರಂತೆ ರಾಹುಲ್​​, ಪ್ರಿಯಾಂಕಾ ಸೇರಿ ಕಾಂಗ್ರೆಸ್​ನ ಐವರು ಮುಖಂಡರು ಸಂತ್ರಸ್ತೆ ಕುಟುಂಬ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಸಂತ್ರಸ್ತೆ ಕುಟುಂಬ ಭೇಟಿಯಾದ ಬಳಿಕ ಮಾತನಾಡಿರುವ ಪ್ರಿಯಾಂಕಾ ಗಾಂಧಿ, ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿರುವ ಸಂತ್ರಸ್ತ ಯುವತಿ ಮೃತದೇಹವನ್ನ ಕೊನೆಯ ಬಾರಿ ನೋಡಲು ಕುಟುಂಬಸ್ಥರಿಗೆ ಅವಕಾಶ ನೀಡಿಲ್ಲ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ತಮ್ಮ ಜವಾಬ್ದಾರಿ ಅರ್ಥ ಮಾಡಿಕೊಳ್ಳಬೇಕು. ನ್ಯಾಯ ದೊರೆಯುವ ತನಕ ನಾವು ಈ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

Last Updated : Oct 3, 2020, 10:59 PM IST

ABOUT THE AUTHOR

...view details