ನವದೆಹಲಿ:ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದಿರುವ ದಲಿತ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಆಡಳಿತ - ವಿಪಕ್ಷಗಳ ನಡುವೆ ಇದೇ ವಿಚಾರವಾಗಿ ವಾಕ್ಸಮರ ನಡೆಯುತ್ತಿದೆ.
ನಮ್ಮ ಸಹೋದರಿಗೆ ನ್ಯಾಯ ಸಿಗುವವರೆಗೂ ಸುಮ್ಮನೆ ಕುಳಿತುಕೊಳ್ಳಲ್ಲ: ವಾಲ್ಮೀಕಿ ದೇವಸ್ಥಾನದಲ್ಲಿ ಪ್ರಿಯಾಂಕಾ ಪ್ರತಿಜ್ಞೆ!
ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಕಳೆದೆರಡು ದಿನಗಳ ಹಿಂದೆ ದೆಹಲಿಯಿಂದ ಪ್ರಯಾಣ ಬೆಳೆಸಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯನ್ನ ನೋಯ್ಡಾ ಪೊಲೀಸರು ತಡೆದು ಕೆಲಹೊತ್ತು ವಶಕ್ಕೆ ಪಡೆದುಕೊಂಡು ಆ ಬಳಿಕ ದೆಹಲಿಗೆ ವಾಪಸ್ ಕಳುಹಿಸಿದ್ದರು. ಈ ವೇಳೆ, ಯಮುನಾ ಎಕ್ಸ್ಪ್ರೆಸ್ ವೇ ಬಳಿ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಸಹ ನಡೆದಿತ್ತು. ಈ ವೇಳೆ ತಮ್ಮ ಮೇಲೆ ಲಾಠಿಚಾರ್ಜ್ ನಡೆಸಲಾಗಿದೆ ಎಂದು ರಾಗಾ ಗಂಭೀರ ಆರೋಪ ಮಾಡಿದ್ದರು.