ಪಾಟ್ನಾ:ಬಿಹಾರ್ ಡಿಸಿಎಂ ಸುಶಿಲ್ ಕುಮಾರ್ ಮೋದಿ ನೀಡಿದ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ಪಾಟ್ನಾ ಸಿವಿಲ್ ಕೋರ್ಟ್ನಿಂದ ಜಾಮೀನು ಪಡೆದ ಬಳಿಕ ರಾಹುಲ್ ಗಾಂಧಿ ರಸ್ತೆ ಬದಿಯ ರೆಸ್ಟೋರೆಂಟ್ನಲ್ಲಿ ದೋಸೆ ಸವಿದರು.
ಚುನಾವಣಾ ಪ್ರಚಾರ ಸಮಾವೇಶದ ವೇಳೆ ಪ್ರಧಾನಿ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ಡಿಸಿಎಂ ಸುಶಿಲ್ ಕುಮಾರ್ ಮೋದಿ ಅವರು ರಾಹುಲ್ ವಿರುದ್ಧ ದೂರು ದಾಖಲಿಸಿದ್ದರು. ಈ ಬಗ್ಗೆ ಪಾಟ್ನಾದ ಸಿವಿಲ್ ನ್ಯಾಯಾಲಯ ವಿಚಾರಣೆಗೆ ಹಾಜಗುವಂತೆ ರಾಹುಲ್ ಗಾಂಧಿಗೆ ಸೂಚಿಸಿತ್ತು.