ಕರ್ನಾಟಕ

karnataka

ರಾಜಸ್ಥಾನ ಬಂಡಾಯ ಶಮನಕ್ಕೆ ಕಾಂಗ್ರೆಸ್​ ಹೈಕಮಾಂಡ್​ ಸರ್ವ ಪ್ರಯತ್ನ

By

Published : Jul 15, 2020, 10:43 AM IST

ಪಕ್ಷದ ವಿರುದ್ಧ ಬಹಿರಂಗ ಬಂಡಾಯ ಎದ್ದ ಉಚ್ಚಾಟನೆಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್​ ಜೊತೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ಹಿರಿಯ ಮುಖಂಡರು ಸಂಪರ್ಕದಲ್ಲಿದ್ದಾರೆ.

Rajasthan Political Crisis
ರಾಜಸ್ಥಾನ ಬಂಡಾಯ ಶಮನಕ್ಕೆ ಯತ್ನ

ಜೈಪುರ : ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಬಂಡಾಯ ಶಮನ ಮಾಡಲು ಕಾಂಗ್ರೆಸ್​ ಹೈಕಮಾಂಡ್​ ನಾಯಕರು ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ಸರ್ಕಾರದ ಪರ ಇರುವ ಶಾಸಕರನ್ನು ಜೈಪುರ ಬಳಿಯ ರೆಸಾರ್ಟ್​ಗೆ ಶಿಫ್ಟ್​ ಮಾಡಲಾಗಿದೆ.

ಪಕ್ಷದ ವಿರುದ್ಧ ಬಹಿರಂಗ ಬಂಡಾಯ ಎದ್ದು ಉಚ್ಚಾಟನೆಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್​ ಜೊತೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ಹಿರಿಯ ನಾಯಕರಾದ ಅಹ್ಮದ್ ಪಟೇಲ್, ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್​ ಮೂಲಗಳು ತಿಳಿಸಿವೆ.

ಮಂಗಳವಾರ ನಡೆದ ಎರಡನೇ ಶಾಸಕಾಂಗ ಪಕ್ಷದ ಸಭೆಗೆ ಸಚಿನ್ ಪೈಲಟ್​ ಸೇರಿದಂತೆ 18 ಶಾಸಕರು ಗೈರು ಹಾಜರಾಗಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿದೆ. ಸೋಮವಾರ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಮೊದಲ ಸಭೆಯಲ್ಲಿ 107 ಶಾಸಕರಿಗೆ ವಿಪ್​ ಜಾರಿ ಮಾಡಿ ಎರಡನೇ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಮತ್ತು 15 ಪಕ್ಷೇತರ ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಎರಡನೇ ಸಿಎಲ್​ಪಿ ಸಭೆ ಮುಗಿಯುತ್ತಿದ್ದಂತೆ, ಶಾಸಕರನ್ನು ಬಸ್​ ಮೂಲಕ ಜೈಪುರ ಹೊರವಲಯದಲ್ಲಿರುವ ಫೇರ್‌ಮಾಂಟ್ ಹೋಟೆಲ್‌ಗೆ ಶಿಫ್ಟ್​ ಮಾಡಲಾಗಿದೆ.

ಬಂಡಾಯ ಕೈ ಬಿಡಲು ಕೈ ನಾಯಕರ ಒತ್ತಾಯ

ಸಚಿನ್ ಪೈಲಟ್​ ಮತ್ತು ಇತರ ಶಾಸಕರು ಮರಳಿ ಬರಬೇಕೆಂದು ನಾವು ವಿನಂತಿಸುತ್ತಿದ್ದೇವೆ. ನಾವು ಸೇರಿ ರಾಜಸ್ಥಾನವನ್ನು ಹೇಗೆ ಬಲಪಡಿಸಬಹುದು ಮತ್ತು ಎಂಟು ಕೋಟಿ ಜನರಿಗೆ ಸೇವೆ ಸಲ್ಲಿಸುವ ಬಗ್ಗೆ ಚರ್ಚಿಸೋಣ. ಸಚಿನ್ ಪೈಲಟ್​ ಬಣದ ಶಾಸಕರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಅವರ ಸಮಸ್ಯೆ ಆಲಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಿದ್ದರಿದ್ದಾರೆ ಎಂದು ಕಾಂಗ್ರೆಸ್​ ವಕ್ತಾರ ರಣದೀಪ್ ಸುರ್ಜೆವಾಲ ತಿಳಿಸಿದ್ದಾರೆ.

ಡಿಸೆಂಬರ್ 2018 ರ ವಿಧಾನಸಭಾ ಚುನಾವಣೆಯ ನಂತರ ರಾಜಸ್ಥಾನ ಮುಖ್ಯಮಂತ್ರಿ ಹುದ್ದೆಯನ್ನು ನಿರಾಕರಿಸಿದ್ದರಿಂದ ಸಚಿನ್ ಪೈಲಟ್ ಅಸಮಾಧಾನಗೊಂಡಿದ್ದರು. ಕಳೆದ ಭಾನುವಾರ ಬಂಡಾಯವೆದ್ದ ಅವರು 30 ಕಾಂಗ್ರೆಸ್ ಶಾಸಕರು ಮತ್ತು ಕೆಲ ಪಕ್ಷೇತರ ಶಾಸಕರು ನಮ್ಮ ಜೊತೆಯಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿಎಂ ಅಶೋಕ್ ಗೆಹ್ಲೋಟ್​ ನಮ್ಮ ಸರ್ಕಾರಕ್ಕೆ ಬಹುಮತವಿದೆ, ಅದು ವಿಧಾಸಭೆಯಲ್ಲಿ ಸಾಬೀತಾಗಿದೆ, ಸಿಎಂ ಮನೆಯಲ್ಲಿ ಅಲ್ಲ ಎಂದಿದ್ದರು. ಪೈಲಟ್​ ಬಿಜೆಪಿಗ ಸೇರುವ ಸಾಧ್ಯತೆಯನ್ನೂ ಅವರು ತಳ್ಳಿ ಹಾಕಿದ್ದರು.

ABOUT THE AUTHOR

...view details