ನವದೆಹಲಿ:ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ಸಶಸ್ತ್ರ ಪಡೆಗಳ ಸನ್ನದ್ಧತೆಯ ಬಗ್ಗೆ ಮಾಹಿತಿ ಪಡೆಯಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ದೇಶದ ಉನ್ನತ ಮಿಲಿಟರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಆರ್. ಕೆ. ಎಸ್ ಭದೌರಿಯಾ ಮತ್ತು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂ. ಎಂ. ನರವಾನೆ ಉಪಸ್ಥಿತರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.