ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನಾಳೆ ಕೇಂದ್ರದ ಗದ್ದುಗೆ ಏರಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮಿತ್ರಪಕ್ಷ ಶಿವಸೇನೆ, ರಾಮಮಂದಿರ ನಿರ್ಮಾಣದ ವಿಚಾರವನ್ನು ಮತ್ತೆ ನೆನಪಿಸಿದೆ.
ಶಿವಸೇನೆಯ ಮುಖವಾಣಿ ಸಾಮ್ನಾ ಸಂಪಾದಕೀಯ ಪುಟದಲ್ಲಿ ರಾಮಮಂದಿರ ನಿರ್ಮಾಣದ ವಿಚಾರವನ್ನು ಪ್ರಸ್ತಾಪಿಸಿದೆ. ಶ್ರೀರಾಮ ಆರಾಧಿಸುವ ಪಕ್ಷ ಮತ್ತೆ ಕೇಂದ್ರದ ಅಧಿಕಾರ ಪಡೆದಿದೆ. ರಾಮರಾಜ್ಯ ನಿರ್ಮಾಣವಾಗುತ್ತೆ ಎಂಬ ಆಸೆಯಿಂದಲೇ ಕೋಟ್ಯಂತರ ಜನರು ಬಿಜೆಪಿ ಆಯ್ಕೆ ಮಾಡಿದ್ದಾರೆ. ಎಲ್ಲವೂ ರಾಮನ ಆಶೀರ್ವಾದದಂತೆಯೆ ನಡೆದಿದೆ. ಇನ್ನು ರಾಮಮಂದಿರ ನಿರ್ಮಾಣಕ್ಕಾಗಿ ನೂರಾರು ಕರಸೇವಕರು ಬಲಿದಾನ ಮಾಡಿದ್ದಾರೆ. ಅವರು ಹರಿಸಿರುವ ರಕ್ತ ವ್ಯರ್ಥವಾಗಬಾರದು. ಇದೇ ಯೋಚನೆಯುಳ್ಳ ಸರ್ಕಾರ ಅಧಿಕಾರಕ್ಕೆ ಬರುತ್ತಿರುವುದರಿಂದ ರಾಮಮಂದಿರ ನಿರ್ಮಾಣ ಕಾರ್ಯ ಖಂಡಿತ ನಡೆಯುತ್ತದೆ ಎಂದು ಬರೆದುಕೊಂಡಿದೆ.