ಚೆನ್ನೈ:ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ದೆಹಲಿಯಲ್ಲಿ ನಡೆದಿರುವ ಹಿಂಸಾಚಾರ ಖಂಡಿಸಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ದೇಶದಲ್ಲಿ ಶಾಂತಿ ಕಾಪಾಡಲು ತಾವು ಯಾವುದೇ ಪಾತ್ರ ನಿರ್ವಹಿಸಲು ಸಿದ್ಧ ಎಂದು ಹೇಳಿದ್ದಾರೆ.
ಜಮಾತುಲ್ ಉಲಾಮ ಸಬಾಯಿ ಸಂಸ್ಥೆ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಳಿಕ ತಮ್ಮ ಪ್ರತಿಕ್ರಿಯೆ ಹೊರಹಾಕಿರುವ ನಟ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದ ಭಾರತೀಯ ಯಾವುದೇ ಮುಸ್ಲಿಮರಿಗೆ ತೊಂದರೆಯಾದರೂ ತಾವು ಪ್ರತಿಭಟನೆಯ ಮುಂದಾಳತ್ವ ವಹಿಸುವುದಾಗಿ ಹೇಳಿದ್ದಾರೆ.