ನವದೆಹಲಿ:ಹಿಂದಿನ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಿರುದ್ಧದ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಆಗಸ್ಟ್ 4 ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠವು 2009 ರ ತಿರಸ್ಕಾರ ಅರ್ಜಿಯ ವಿಚಾರಣೆಯನ್ನ ಮುಂದೂಡಿದೆ. ಪ್ರಶಾಂತ್ ಭೂಷಣ್ ಪರ ಹಾಜರಾದ ಹಿರಿಯ ವಕೀಲ ಡಾ.ರಾಜೀವ್ ಧವನ್, ಈ ಪ್ರಕರಣವು 2009 ರ ವರ್ಷದ್ದಾಗಿದೆ ಮತ್ತು ಈ ವಿಷಯದಲ್ಲಿ ಕೊನೆಯ ವಿಚಾರಣೆಯನ್ನು 2013 ರಲ್ಲಿ ನಡೆಸಲಾಗಿದೆ ಎಂಬುದನ್ನ ಕೋರ್ಟ್ ಗಮನಕ್ಕೆ ತಂದರು