ಕರ್ನಾಟಕ

karnataka

ಉಚಿತವಾಗಿ ಪ್ರಯಾಣ ಕೋರಿ ವಲಸೆ ಕಾರ್ಮಿಕರ ಪರ ಸಲ್ಲಿಸಿದ್ದ ಅರ್ಜಿ ವಜಾ

By

Published : May 5, 2020, 4:07 PM IST

ವಲಸೆ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಯಾವುದೇ ರೀತಿಯ ಹಣ ವಸೂಲಿ ಮಾಡಬಾರದು ಎಂದು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ ಅರ್ಜಿ ವಜಾಗೊಂಡಿದೆ.

SC disposes of PIL
SC disposes of PIL

ನವದೆಹಲಿ:ವಿವಿಧ ರಾಜ್ಯಗಳಲ್ಲಿ ಉಳಿದುಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಲು ಕೇಂದ್ರ ಸರ್ಕಾರ ಯಾವುದೇ ರೀತಿಯ ಹಣ ಪಡೆದುಕೊಳ್ಳಬಾರದು ಎಂದು ಕೋರಿ ಸುಪ್ರೀಂಕೋರ್ಟ್​ಗೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಂಡಿದೆ.

ವಲಸೆ ಕಾರ್ಮಿಕರು ತವರು ರಾಜ್ಯಗಳಿಗೆ ತೆರಳಲು ರೈಲು ಟಿಕೆಟ್​ ಪಡೆದುಕೊಳ್ಳಲು ಹಣ ವಸೂಲಿ ಮಾಡಬಾರದು. ಅವರು ತವರು ನಾಡಿಗೆ ತೆರಳಲು ಅಗತ್ಯವಿರುವ ಎಲ್ಲ ವ್ಯವಸ್ಥೆಯನ್ನೂ ಕೇಂದ್ರ ಸರ್ಕಾರ ಮಾಡಬೇಕು ಎಂದು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಜಗದೀಪ್​ ಚಾಕ್ಕೂರ್​​ ಎಂಬುವವರು ಅರ್ಜಿ ಸಲ್ಲಿಸಿದ್ದು, ಇದರ ಪರವಾಗಿ ವಕೀಲ ಪ್ರಶಾಂತ್​ ಭೂಷಣ್​ ವಾದ ಮಂಡಿಸಿದ್ದರು.

ದೇಶದ ವಿವಿಧ ಸ್ಥಳಗಳಲ್ಲಿರುವ ವಲಸೆ ಕಾರ್ಮಿಕರ ಬಳಿ 100 ರೂಗಿಂತಲೂ ಕಡಿಮೆ ಹಣವಿದೆ. ಆದರೆ ವಿವಿಧ ಪ್ರದೇಶಗಳಿಗೆ ತೆರಳಲು ರೂ 700ರಿಂದ ರೂ 800ರವರೆಗೆ ವಸೂಲಿ ಮಾಡಲಾಗುತ್ತಿದೆ. ಆದರೆ ಕಾರ್ಮಿಕರು ಮನೆ ಸೇರಿಕೊಳ್ಳಲು ಟಿಕೆಟ್​ ದರದಲ್ಲಿ ಶೆ.85ರಷ್ಟು ಸಬ್ಸಿಡಿ ನೀಡಬೇಕು ಎಂದಿದ್ದರು. ಇದೇ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರ ಜನರಲ್ ತುಷಾರ್​ ಮೆಹ್ತಾ ವಾದ ಮಂಡಿಸಿದರು.

ನಿನ್ನೆ ಇದೇ ವಿಷಯವಾಗಿ ಮಾತನಾಡಿದ್ದ ಸೋನಿಯಾ ಗಾಂಧಿ ವಲಸೆ ಕಾರ್ಮಿಕರು ಮನೆಗೆ ತೆರಳಲು ರೈಲ್ವೆ ಟಿಕೆಟ್​ ಪಡೆದುಕೊಳ್ಳುತ್ತಿದ್ದು, ಈ ವೇಳೆ ಹೆಚ್ಚು ಹಣ ಅವರಿಂದ ವಸೂಲಿ ಮಾಡಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದರು.

ABOUT THE AUTHOR

...view details