ನವದೆಹಲಿ: ಶಾಲೆಗಳಲ್ಲಿ ಒಂದರಿಂದ ಆರನೇ ತರಗತಿಯವರೆಗೆ ಇಂಗ್ಲಿಷ್ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಮಾಡುವಂತೆ ಆಂಧ್ರಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ಇಂದು ನೋಟಿಸ್ ನೀಡಿದೆ.
ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾ.ಮಲ್ಹೋತ್ರಾ ಮತ್ತು ನ್ಯಾ.ಕೆ.ಎಂ ಜೋಸೆಫ್ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿ, ಈ ಬಗ್ಗೆ ಪ್ರತಿಕ್ರಿಯೆ ದಾಖಲಿಸುವಂತೆ ಶ್ರೀನಿವಾಸ್ ಗುಂಟಿಪಲ್ಲಿ ಅವರಿಗೆ ನೋಟಿಸ್ ನೀಡಿದೆ. ತೆಲುಗು ಮಾಧ್ಯಮ ಶಾಲೆಗಳಲ್ಲಿ ಇಂಗ್ಲಿಷ್ ಅನುಷ್ಠಾನಗೊಳಿಸುವುದನ್ನು ಪ್ರಶ್ನಿಸಿ ಶ್ರೀನಿವಾಸ್ ಗುಂಟಿಪಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ, ಯೋಜನೆಗೆ ತಡೆಯಾಜ್ಞೆ ತಂದಿದ್ದರು. ಈ ವರ್ಷದ ಏಪ್ರಿಲ್ನಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಮಾಧ್ಯಮವನ್ನು ತೆಲುಗಿನಿಂದ ಇಂಗ್ಲಿಷ್ಗೆ ಪರಿವರ್ತಿಸುವ ಆದೇಶವನ್ನು ಹೈಕೋರ್ಟ್ ತಡೆಹಿಡಿದಿತ್ತು.