ನವದೆಹಲಿ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ನ ನ್ಯಾಯಪೀಠ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಜಮ್ಮು- ಕಾಶ್ಮೀರದ ವಿಶೇಷಾಧಿಕಾರ ರದ್ದು ನ್ಯಾಯವೇ? ಇಂದು ಎಲ್ಲರ ಚಿತ್ತ ಸುಪ್ರೀಂಕೋರ್ಟ್ನತ್ತ - ಸುಪ್ರೀಂಕೋರ್ಟ್
ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ಸಂವಿಧಾನದ ವಿಧಿ 370 ಹಾಗೂ 35ಎ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ ವಿಧೇಯಕ ಅನುಮೋದನೆಗೊಳಿಸಿತ್ತು. ಇದಕ್ಕೂ ಮೊದಲು ಸಾಕಷ್ಟು ನಿರ್ಬಂಧಗಳನ್ನು ವಿಧಿಸಿ ರಾಜಕೀಯ ಮುಖಂಡರನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು. ಕೇಂದ್ರದ ನಡೆಯನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್ಗೆ ಸಲ್ಲಿಕೆಯಾಗಿದ್ದವು. ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಇಂದು ಈ ವಿಚಾರಣೆ ಕೈಗೆತ್ತಿಗೊಳ್ಳಲಿದೆ.
![ಜಮ್ಮು- ಕಾಶ್ಮೀರದ ವಿಶೇಷಾಧಿಕಾರ ರದ್ದು ನ್ಯಾಯವೇ? ಇಂದು ಎಲ್ಲರ ಚಿತ್ತ ಸುಪ್ರೀಂಕೋರ್ಟ್ನತ್ತ](https://etvbharatimages.akamaized.net/etvbharat/prod-images/768-512-4609861-thumbnail-3x2-sc.jpg)
ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಈ ವಿಚಾರಣೆ ನಡೆಸಲಿದೆ. ಆಗಸ್ಟ್ 5ರಂದು ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ಸಂವಿಧಾನದ ವಿಧಿ 370 ಹಾಗೂ 35ಎ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ ವಿಧೇಯಕವನ್ನು ಅನುಮೋದನೆಗೊಳಿಸಿತ್ತು.
ಕಾಶ್ಮೀರದಲ್ಲಿ ಪತ್ರಕರ್ತರ ಓಡಾಟಕ್ಕೆ ನಿರ್ಬಂಧ ಮತ್ತು ಮಕ್ಕಳನ್ನೂ ವಶದಲ್ಲಿ ಇರಿಸಿಕೊಳ್ಳಲಾಗಿತ್ತು ಎಂದು ಆರೋಪಿಸಿ ಹಲವು ಅರ್ಜಿಗಳು ಸುಪ್ರೀಂಕೋರ್ಟ್ಗೆ ಸಲ್ಲಿಕೆಯಾಗಿದ್ದವು. ನ್ಯಾಷನಲ್ ಕಾನ್ಫರೆನ್ಸ್, ನಿವೃತ್ತ ಸೇನಾಧಿಕಾರಿಗಳು ಮತ್ತು ನಾಗರಿಕ ಸೇವೆ ಅಧಿಕಾರಿಗಳೂ ಕೂಡ ಸರ್ಕಾರದ ನಡೆಯನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಸಿದ್ದರು.