ಕರ್ನಾಟಕ

karnataka

By

Published : Oct 3, 2020, 7:12 PM IST

Updated : Oct 3, 2020, 7:22 PM IST

ETV Bharat / bharat

ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್: ರಕ್ಷಣೆಗೆ ಮುಂದಾದ ಪ್ರಿಯಾಂಕಾ- ವಿಡಿಯೋ

ಹಥ್ರಾಸ್​ ಸಂತ್ರಸ್ತೆ ಕುಟುಂಬದ ಸದಸ್ಯರ ಭೇಟಿ ಮಾಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನ ನೋಯ್ಡಾ ಫ್ಲೈಓವರ್​ ಬಳಿ ತಡೆಯುತ್ತಿದ್ದಂತೆ ಕಾಂಗ್ರೆಸ್​ ಕಾರ್ಯಕರ್ತರು - ಪೊಲೀಸರ ನಡುವೆ ಜಟಾಪಟಿ ನಡೆದಿದೆ.

Congress workers at Delhi-Noida flyway
Congress workers at Delhi-Noida flyway

ನೋಯ್ಡಾ:ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಮಾರಣಾಂತಿಕ ಹಲ್ಲೆಗೊಳಗಾಗಿ ಮೃತಪಟ್ಟಿರುವ ದಲಿತ ಯುವತಿ ಕುಟುಂಬದ ಸದಸ್ಯರ ಭೇಟಿ ಮಾಡಲು ರಾಹುಲ್​, ಪ್ರಿಯಾಂಕಾ ಗಾಂಧಿ ಸೇರಿ ಐವರಿಗೆ ಅನುಮತಿ ನೀಡಲಾಗಿದೆ.

ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ದೆಹಲಿಯಿಂದ ತೆರಳುತ್ತಿದ್ದ ವೇಳೆ ನೋಯ್ಡಾ ಫ್ಲೈಓವರ್​​ ಬಳಿ ಇವರನ್ನ ತಡೆ ಹಿಡಿಯಲಾಗಿತ್ತು. ಈ ವೇಳೆ, ಕಾಂಗ್ರೆಸ್​​ ಕಾರ್ಯಕರ್ತರು ಹಾಗೂ ಉತ್ತರಪ್ರದೇಶ ಪೊಲೀಸರ ನಡುವೆ ಜಟಾಪಟಿಯಾಗಿದ್ದು, ಪೊಲೀಸರು ಲಾಠಿಚಾರ್ಜ್​ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್​ ಮಾಡಲು ಪೊಲೀಸರು ಮುಂದಾಗುತ್ತಿದ್ದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಧ್ಯ ಪ್ರವೇಶ ಮಾಡಿದ್ದು, ತಮ್ಮ ಪಕ್ಷದ ಕಾರ್ಯಕರ್ತರನ್ನ ರಕ್ಷಣೆ ಮಾಡಲು ಧಾವಿಸಿದ್ದಾರೆ.

ಹಥ್ರಾಸ್​ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ರಾಹುಲ್​, ಪ್ರಿಯಾಂಕ ಸೇರಿ ಐವರಿಗೆ ಅನುಮತಿ

ಹಥ್ರಾಸ್​ ಅತ್ಯಾಚಾರ ಪ್ರಕರಣ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಕಾಂಗ್ರೆಸ್​ ಹಾಗೂ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಪಂಜಾಬ್​, ಕೋಲ್ಕತ್ತಾ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

Last Updated : Oct 3, 2020, 7:22 PM IST

ABOUT THE AUTHOR

...view details