ಕರ್ನಾಟಕ

karnataka

ETV Bharat / bharat

ಔರಂಗಾಬಾದ್: ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು - ಬಿಹಾರ, ಔರಂಗಾಬಾದ್,ಭದ್ರತಾ ಪಡೆಗಳ ಕಾರ್ಯಾಚರಣೆ, ಗುಂಡಿನ ಚಕಮಕಿ, ಕೋಬ್ರಾ, ಎಸ್‌ಟಿಪಿ ಮತ್ತು ಸಿಆರ್‌ಪಿಎಫ್  ಪಡೆಗಳು , ನಕ್ಸಲರ ಹತ್ಯೆ, ಕನ್ನಡ ವಾರ್ತೆ, ಈಟಿವಿ ಭಾರತ

ಬಿಹಾರದ ಔರಂಗಾಬಾದ್ ನಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿವೆ.

ನಾಲ್ಕು ಜನ ನಕ್ಸಲ್ ರನ್ನು ಹೊಡದುರುಳಿಸಿದ ಭದ್ರತಾ ಪಡೆಗಳು

By

Published : Jul 25, 2019, 4:21 PM IST

ಔರಂಗಾಬಾದ್ (ಬಿಹಾರ): ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ನಾಲ್ವರು 4 ನಕ್ಸಲರನ್ನು ಹೊಡೆದುರುಳಿಸಿವೆ.

ಕೋಬ್ರಾ, ಎಸ್‌ಟಿಪಿ ಮತ್ತು ಸಿಆರ್‌ಪಿಎಫ್ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ದೇವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಸುಮಾರು 500 ಸುತ್ತಿನ ಗುಂಡಿನ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಹೆಚ್ಚುವರಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

For All Latest Updates

TAGGED:

ABOUT THE AUTHOR

...view details