ಕರ್ನಾಟಕ

karnataka

ಸಚಿವರು, ಶಾಸಕರು ಸಂಬಳದ ಶೇ.30ರಷ್ಟನ್ನು ಕೋವಿಡ್‌ ಪರಿಹಾರ ನಿಧಿಗೆ ನೀಡಿ: ಸಿಎಂ ಚೌಹಾಣ್

By

Published : Jul 31, 2020, 3:36 PM IST

ಮಧ್ಯಪ್ರದೇಶದಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆ 30 ಸಾವಿರದ ಗಡಿ ದಾಟಿದೆ. ವೈರಾಣುವಿನ ವಿರುದ್ಧ ಹೋರಾಡಲು ರಾಜ್ಯದ ಎಲ್ಲ ಸಚಿವರು, ಶಾಸಕರು ಮುಂದಿನ 3 ತಿಂಗಳ ಕಾಲ ತಮ್ಮ ಸಂಬಳದ ಶೇ.30ರಷ್ಟು ಭಾಗವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುವಂತೆ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಮನವಿ ಮಾಡಿದ್ದಾರೆ.

Shivraj Singh Chouhan
Shivraj Singh Chouhan

ಭೋಪಾಲ್ ​(ಮಧ್ಯಪ್ರದೇಶ):ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಕೊರೊನಾ ವೈರಸ್ ಸೋಂಕಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವೇಳೆ, ಆಸ್ಪತ್ರೆಯಿಂದಲೇ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಜನಪ್ರತಿನಿಧಿಗಳ ಜೊತೆ ಮಾತನಾಡಿದರು.

ಕೋವಿಡ್​ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸುವ ಅವಶ್ಯಕತೆ ಇದೆ. ಹೀಗಾಗಿ ಕೋವಿಡ್‌ ಪರಿಹಾರ ಕಾರ್ಯಗಳಿಗೆ ಬಳಸಿಕೊಳ್ಳಲು ನೆರವಾಗಲು ಸಚಿವರು ಹಾಗೂ ಶಾಸಕರು ತಮ್ಮ ವೇತನದ ಶೇ.30ರಷ್ಟು ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಆಗಸ್ಟ್​, ಸೆಪ್ಟೆಂಬರ್​ ಹಾಗೂ ಅಕ್ಟೋಬರ್​ ತಿಂಗಳಲ್ಲಿ ಕೊರೊನಾ ಹರಡುವಿಕೆ ಪ್ರಮಾಣ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಅದಕ್ಕಾಗಿ ನಾವೆಲ್ಲರೂ ಈಗಿನಿಂದಲೇ ತಯಾರಿ ನಡೆಸಬೇಕಾಗಿದೆ ಎಂದರು.

ABOUT THE AUTHOR

...view details