ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್ಒಸಿ)ಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಬುಧವಾರ ಓರ್ವ ಭಾರತೀಯ ಸೈನಿಕ ಹುತಾತ್ಮ ಆಗಿರುವುದಾಗಿ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ರಾಜಸ್ಥಾನದ ಜೋಧ್ಪುರ್ ನಿವಾಸಿ ಸಿಪಾಯಿ ಲಕ್ಷ್ಮಣ್ ಗುಂಡಿನ ದಾಳಿಯಿಂದ ಹುತಾತ್ಮನಾಗಿರುವ ಸೈನಿಕ. ಈ ವರ್ಷದಲ್ಲಿ ಪಾಕಿಸ್ತಾನದ ಸೈನಿಕರು ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಹುತಾತ್ಮನಾದ ನಾಲ್ಕನೇ ಸೈನಿಕ ಇವರಾಗಿದ್ದಾರೆ.
ಪಾಕಿಸ್ತಾನ ಸೇನೆಯು ರಾಜೌರಿಯ ಸುಂದರಬಾನಿ ಸೆಕ್ಟರ್ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಶತ್ರುಗಳ ಗುಂಡಿನ ದಾಳಿಗೆ ನಮ್ಮ ಸೈನ್ಯವು ಬಲವಾಗಿ ಪ್ರತಿಕ್ರಿಯಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.