ಕರ್ನಾಟಕ

karnataka

ದಿಲ್ಲಿಯವರು ನನಗೆ ಪ್ರಜಾಪ್ರಭುತ್ವದ ಪಾಠ ಹೇಳುತ್ತಿದ್ದಾರೆ: ರಾಹುಲ್​ಗೆ ಮೋದಿ ತಿರುಗೇಟು

By

Published : Dec 26, 2020, 3:36 PM IST

ಇತ್ತೀಚೆಗೆ ರಾಹುಲ್​ ಗಾಂಧಿ ಪ್ರಧಾನಿ ಮೋದಿ ಮೇಲೆ ಟೀಕಾಪ್ರಹಾರ ನಡೆಸಿ, 'ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ. ಪ್ರಧಾನ ಮಂತ್ರಿಯ ವಿರುದ್ಧ ಎದ್ದು ನಿಂತವರನ್ನು ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ. ಒಂದು ವೇಳೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಮೋದಿ ಆಡಳಿತದ ವಿರುದ್ಧ ಧ್ವನಿ ಎತ್ತಿದರೇ ಅವರನ್ನೂ ಭಯೋತ್ಪಾದಕ ಎಂದು ಕರೆಯಲಾಗುತ್ತೆ' ಎಂದು ಹೇಳಿಕೆ ನೀಡಿದ್ದರು.

Rahul Modi
ರಾಹುಲ್​ ಮೋದಿ

ನವದೆಹಲಿ: ದೆಹಲಿಯಲ್ಲಿ ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠಗಳನ್ನು ಕಲಿಸಲು ಬಯಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಇತ್ತೀಚೆಗೆ ರಾಹುಲ್​ ಗಾಂಧಿ ಪ್ರಧಾನಿ ಮೋದಿ ಮೇಲೆ ಟೀಕಾಪ್ರಹಾರ ನಡೆಸಿ, 'ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ. ಪ್ರಧಾನ ಮಂತ್ರಿಯ ವಿರುದ್ಧ ಎದ್ದು ನಿಂತವರನ್ನು ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ. ಒಂದು ವೇಳೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಮೋದಿ ಆಡಳಿತದ ವಿರುದ್ಧ ಧ್ವನಿ ಎತ್ತಿದರೆ ಅವರನ್ನೂ ಭಯೋತ್ಪಾದಕ ಎಂದು ಕರೆಯಲಾಗುತ್ತೆ' ಎಂದು ಹೇಳಿಕೆ ನೀಡಿದ್ದರು.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳಿಗೆ ಆರೋಗ್ಯ ವಿಮೆಯ ಆಯುಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ, ದೆಹಲಿಯಲ್ಲಿ ಯಾವಾಗಲೂ ನನ್ನನ್ನು ಕೆಣಕುವ ಮತ್ತು ಅವಮಾನಿಸುವ ಜನರಿದ್ದಾರೆ. ಅವರು ನನಗೆ ಪ್ರಜಾಪ್ರಭುತ್ವದ ಪಾಠಗಳನ್ನು ಕಲಿಸಲು ಬಯಸುತ್ತಾರೆ. ಜಮ್ಮು ಮತ್ತು ಕಾಶ್ಮೀರ ಡಿಡಿಸಿ (ಜಿಲ್ಲಾ ಅಭಿವೃದ್ಧಿ ಮಂಡಳಿ) ಚುನಾವಣೆಗಳನ್ನು ಪ್ರಜಾಪ್ರಭುತ್ವದ ಉದಾಹರಣೆಯಾಗಿ ತೋರಿಸಬೇಕೆಂದು ನಾನು ಬಯಸುತ್ತೇನೆ ಎಂದು ತಿರುಗೇಟು ನೀಡಿದರು.

ಓದಿ:ನೇಪಾಳ ಅಸ್ಥಿರ: ಸುಪ್ರೀಂಕೋರ್ಟ್​, ಚು.ಆಯೋಗದ ಕದತಟ್ಟಿದ ನೇಪಾಳ ಕಾಂಗ್ರೆಸ್ ಪಕ್ಷ

ಕೆಲವು ರಾಜಕೀಯ ಶಕ್ತಿಗಳು ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡುತ್ತಲೇ ಇರುತ್ತವೆ. ಪುದುಚೇರಿಯಲ್ಲಿ ಆಡಳಿತ ನಡೆಸುವ ಪಕ್ಷವು ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಿಲ್ಲ. ಆದರೆ, ಜಮ್ಮು ಮತ್ತು ಕಾಶ್ಮೀರ ಕೇಂದ್ರ ಪ್ರದೇಶವಾದ ನಂತರ ಒಂದು ವರ್ಷದೊಳಗೆ ಪಂಚಾಯಿತಿ ಮಟ್ಟದ ಚುನಾವಣೆಗಳನ್ನು ನಡೆಸಿದೆ ಎಂದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಿದೆ. ಎಂಟು ಹಂತದ ಚುನಾವಣೆಯಲ್ಲಿ ಮತದಾರರು ತಮ್ಮ ಮತ ಚಲಾಯಿಸಿದ್ದಕ್ಕಾಗಿ ಅಭಿನಂದಿಸಿದರು.

ಪ್ರಜಾಪ್ರಭುತ್ವವನ್ನು ಬಲಪಡಿಸಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನರನ್ನು ಅಭಿನಂದಿಸಲು ನಾನು ಬಯಸುತ್ತೇನೆ. ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯಲ್ಲಿ ಯುವಕರು ಮತ್ತು ಹಿರಿಯರು ಮತದಾನ ಕೇಂದ್ರಗಳಿಗೆ ಹೇಗೆ ತಲುಪಿದ್ದಾರೆಂದು ನಾನು ನೋಡಿದೆ. ಅಲ್ಲಿನ ಜನರು ಪ್ರಜಾಪ್ರಭುತ್ವದ ಮೂಲಗಳನ್ನು ಬಲಪಡಿಸಿದ್ದಾರೆ ಎಂದು ಪ್ರಧಾನಿ ಶ್ಲಾಘಿಸಿದರು.

ABOUT THE AUTHOR

...view details