ETV Bharat Karnataka

ಕರ್ನಾಟಕ

karnataka

ETV Bharat / bharat

ಅಪ್ರಾಪ್ತ ಬಾಲಕನ ಅಪಹರಿಸಿ 2 ಕೋಟಿಗೆ ಬೇಡಿಗೆ ಇಟ್ಟ ದುಷ್ಕರ್ಮಿಗಳು - 2 ಕೋಟಿ ರೂಪಾಯಿಗೆ ಬೇಡಿಗೆ ಇಟ್ಟ ದುಷ್ಕರ್ಮಿಗಳು

ಮಧ್ಯಪ್ರದೇಶದ ಜಬಲ್ಪುರದಲ್ಲಿ ಅಪ್ರಾಪ್ತ ಬಾಲಕನನ್ನು ಅಪಹರಿಸಿದ ದುಷ್ಕರ್ಮಿಗಳು 2 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ.

Son of Transport businessman kidnapped
ಮಧ್ಯಪ್ರದೇಶದಲ್ಲಿ ಉದ್ಯಮಿಯ ಮಗನ ಅಪಹರಣ
author img

By

Published : Oct 16, 2020, 11:37 AM IST

ಜಬಲ್ಪುರ (ಮಧ್ಯ ಪ್ರದೇಶ):ಉದ್ಯಮಿಯೊಬ್ಬರ 13 ವರ್ಷದ ಮಗನನ್ನು ಅಪಹರಿಸಿ 2 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.

ಅಪಹರಣಕ್ಕೊಳಗಾದ ಮಗುವಿನ ತಂದೆ ದೂರು ನೀಡಿದ ನಂತರ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಧನ್ವಂತರಿ ನಗರದಲ್ಲಿರುವ ನಿವಾಸದಿಂದ ಸಂಜೆ 6 ಗಂಟೆ ಸಮಯದಲ್ಲಿ ದಿನಸಿ ಸಾಮಗ್ರಿಗಳನ್ನು ತೆಗೆದುಕೊಂಡು ಬರಲು ಹೊರ ಬಂದಾಗ ಬಾಲಕನ ಅಪಹರಣ ನಡೆದಿದೆ.

ದುಷ್ಕರ್ಮಿಗಳು ಮಗುವಿನ ಪೋಷಕರಿಗೆ ಕರೆ ಮಾಡಿ 2 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಾಗ ಅಪಹರಣದ ಬಗ್ಗೆ ಕುಟುಂಬಕ್ಕೆ ತಿಳಿದುಬಂದಿದೆ. ಕೇಳಿದಷ್ಟು ಹಣ ನೀಡದಿದ್ದರೆ ಅಥವಾ ಪೊಲೀಸರಿಗೆ ಮಾಹಿತಿ ನೀಡಿದರೆ ಪುತ್ರನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಪೊಲೀಸ್ ನಿಗಾವಣೆ ಮತ್ತು ವಿಶೇಷ ಕಾರ್ಯಾಚರಣೆ ತಂಡಗಳು ಅಪಹರಣಕಾರರಿಗಾಗಿ ಬಲೆ ಬೀಸಿದ್ದು, ಇಲ್ಲಿಯವರೆಗೂ ಮಗುವಿನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.

ABOUT THE AUTHOR

author-img

...view details