ನವದೆಹಲಿ: ದೇಶದ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಮಾತುಕತೆ ನಡೆಸಲಿದ್ದಾರೆ. ಮೂರನೇ ಹಂತದ ಲಾಕ್ಡೌನ್ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ.
ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂಗಳೊಂದಿಗೆ ನಾಳೆ ಸೋನಿಯಾ ಚರ್ಚೆ - ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ
ವಿಡಿಯೋ ಕಾನ್ಫರೆನ್ಸ್ ಮೂಲಕ ನಾಳೆ ನಡೆಯುವ ಸಭೆಯಲ್ಲಿ ಪಂಜಾಬ್, ರಾಜಸ್ಥಾನ, ಛತ್ತೀಸಗಢ ಹಾಗೂ ಪುದುಚೇರಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚ ಭರಿಸುವಿಕೆ ಹಾಗೂ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಅವರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಂವಾದದ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಸಭೆಯಲ್ಲಿ ಪಂಜಾಬ್, ರಾಜಸ್ಥಾನ, ಛತ್ತೀಸಗಢ ಹಾಗೂ ಪುದುಚೇರಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚ ಭರಿಸುವಿಕೆ ಹಾಗೂ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಅವರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಂವಾದದ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪೂರ್ವ ಸಿದ್ಧತೆ ಇಲ್ಲದ ಲಾಕ್ಡೌನ್ನಿಂದಾಗಿ ವಲಸೆ ಕಾರ್ಮಿಕರು ಸಾಕಷ್ಟು ತೊಂದರೆಗೀಡಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ವಲಸೆ ಕಾರ್ಮಿಕರ ವಿಷಯವನ್ನು ಸರಕಾರದ ವಿರುದ್ಧ ಹೇಗೆ ಬಳಸಬಹುದು ಎಂಬುದರ ಕುರಿತಾಗಿ ಕಾರ್ಯತಂತ್ರಗಳನ್ನು ಈ ಸಭೆಯಲ್ಲಿ ರೂಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಲಾಕ್ಡೌನ್ನಿಂದ ಕುಸಿದ ಆರ್ಥಿಕತೆ ಮೇಲೆತ್ತಲು ಕೇಂದ್ರ ಸರ್ಕಾರ ಎಲ್ಲ ಬಡವರ ಖಾತೆಗಳಿಗೆ ತಲಾ 10 ಸಾವಿರ ರೂಪಾಯಿ ಜಮೆ ಮಾಡಬೇಕೆಂದು ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ರಾಹುಲ್ ಜೊತೆಗಿನ ಸಂವಾದದಲ್ಲಿ ಹೇಳಿದ್ದರು.