ಕರ್ನಾಟಕ

karnataka

ETV Bharat / bharat

ಲಾಕ್​ಡೌನ್​ ನಿಮಯ ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ - ಲಾಕ್​ಡೌನ್​ ಜಾರಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 400ರ ಗಡಿ ದಾಟಿದ್ದು, ಈಗಾಗಲೇ ಲಾಕ್​ಡೌನ್​ ಘೋಷಣೆಯಾಗಿರುವ ರಾಜ್ಯಗಳಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

PM Modi
ಪಿಎಂ ಮೋದಿ

By

Published : Mar 23, 2020, 12:28 PM IST

ನವದೆಹಲಿ: ಕೊರೊನಾ ವೈರಸ್​ ಹರಡುವಿಕೆಯನ್ನು ತಡೆಗಟ್ಟಲು ಕಟ್ಟುನಿಟ್ಟಾಗಿ ಲಾಕ್​ಡೌನ್​ ಜಾರಿಗೆ ತರಬೇಕು ಹಾಗೂ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಆದೇಶ ನೀಡಿದೆ.

ಅನೇಕ ಜನರು ಲಾಕ್​ಡೌನ್ ಅನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಈಗಾಗಲೇ ಯಾವ್ಯಾವ ರಾಜ್ಯಗಳಲ್ಲಿ ಲಾಕ್​ಡೌನ್​ ಘೋಷಿಸಲಾಗಿದೆಯೋ ಅಲ್ಲಿ ಕಟ್ಟುನಿಟ್ಟಾಗಿ ನಿಯಮಗಳನ್ನ ಪಾಲಿಸಿ. ಈ ಮೂಲಕ ನಿಮ್ಮನ್ನು, ನಿಮ್ಮ ಕುಟುಂಬವನ್ನು ಉಳಿಸಿಕೊಳ್ಳಿ. ಕಾನೂನು ನಿಯಮಗಳನ್ನು ಸರಿಯಾಗಿ ಅನುಸರಿಸಿ ಎಂದು ನಾನು ರಾಜ್ಯ ಸರ್ಕಾರಗಳನ್ನು ವಿನಂತಿಸುತ್ತೇನೆ ಎಂದು ಪಿಎಂ ಮೋದಿ ಟ್ವೀಟ್​ ಮಾಡಿದ್ದಾರೆ.

ಕೊವಿಡ್​-19 ಪ್ರಕರಣಗಳು ವರದಿಯಾದ ದೇಶದ 75 ಜಿಲ್ಲೆಗಳನ್ನು ಸಂಪೂರ್ಣವಾಗಿ ಬಂದ್​ ಮಾಡಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಧರಿಸಿದೆ. ಅಲ್ಲದೇ ಮಾ.31ರ ವರೆಗೆ ಅಂತರರಾಜ್ಯ ಬಸ್​ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 400ರ ಗಡಿ ದಾಟುತ್ತಿದ್ದಂತೆಯೇ ಈಗಾಗಲೇ ಲಾಕ್​ಡೌನ್​ ಘೋಷಣೆಯಾಗಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್​, ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಅಗತ್ಯ ಸೇವೆಗಳ ಹೊರತಾಗಿ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಕಚೇರಿಗಳು, ಗೋದಾಮುಗಳು, ಮಾರುಕಟ್ಟೆಗಳು ಬಂದ್​ ಆಗಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸೂಚಿಸಿದೆ.

ABOUT THE AUTHOR

...view details