ಕರ್ನಾಟಕ

karnataka

By

Published : Nov 2, 2020, 1:47 PM IST

ETV Bharat / bharat

ಕಮಲ್​ನಾಥ್​ಗೆ ರಿಲೀಫ್.. ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ

ಸತತವಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಕಮಲ್​​ನಾಥ್​​ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿತ್ತು. ಈ ಆದೇಶ ಪ್ರಶ್ನಿಸಿ ಕಮಲ್​ನಾಥ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ..

Former Madhya Pradesh CM Kamal Nath
ಮಧ್ಯಪ್ರದೇಶ ಮಾಜಿ ಸಿಎಂ ಕಮಲ್​ನಾಥ್​

ನವದೆಹಲಿ: ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಕಮಲ್​​​ನಾಥ್​​​ರನ್ನು ಕೈಬಿಟ್ಟಿದ್ದ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಕಮಲ್​​ನಾಥ್​ಗೆ ರಿಲೀಫ್ ಸಿಕ್ಕಂತಾಗಿದೆ.

ಇದಕ್ಕೂ ಮೊದಲು ಸತತವಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಕಮಲ್​​ನಾಥ್​​ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿತ್ತು.

ಈ ಆದೇಶ ಪ್ರಶ್ನಿಸಿ ಕಮಲ್​ನಾಥ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂಕೋರ್ಟ ತಡೆ ನೀಡಿದೆ.

ABOUT THE AUTHOR

...view details