ಕರ್ನಾಟಕ

karnataka

ETV Bharat / bharat

ಮತ್ತೆ ಉಗ್ರರ ಅಟ್ಟಹಾಸದ ಎಚ್ಚರಿಕೆ: ಶ್ರೀನಗರ, ಅವಂತಿಪೋರಾ ವಾಯು ನೆಲೆಗಳಲ್ಲಿ ಹೈ ಅಲರ್ಟ್​

ಜಮ್ಮು-ಕಾಶ್ಮೀರದ ಶ್ರೀನಗರ ಮತ್ತು ಅವಂತಿಪೋರಾ ವಾಯು ನೆಲೆಗಳು ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಭದ್ರತೆ ವಹಿಸಲಾಗಿದೆ.

By

Published : May 17, 2019, 10:12 AM IST

Updated : May 17, 2019, 10:54 AM IST

ದಾಳಿ

ಜಮ್ಮು-ಕಾಶ್ಮೀರ:ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ವಾಯು ನೆಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಜಮ್ಮು-ಕಾಶ್ಮೀರದ ಶ್ರೀನಗರ ಮತ್ತು ಅವಂತಿಪೋರಾ ವಾಯು ನೆಲೆಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕ ಸಂಘಟನೆಗಳು ಯೋಜನೆ ರೂಪಿಸಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾಯು ನೆಲೆಗಳು ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಭದ್ರತೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ನಿನ್ನೆ ತಾನೆ ದಕ್ಷಿಣ ಕಾಶ್ಮೀರದಲ್ಲಿನ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಯೋತ್ಪಾದಕರು ಹಾಗೂ ಸೈನಿಕರ ನಡುವಿನ ಗುಂಡಿನ ಚಕಮಕಿ ನಡೆದಿತ್ತು. ಕಾಳಗದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದರು.

Last Updated : May 17, 2019, 10:54 AM IST

For All Latest Updates

TAGGED:

ABOUT THE AUTHOR

...view details