ಮಥುರಾ:ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುವವರು ಮಾನಸಿಕ ಅಸ್ವಸ್ಥರು. ಅವರಿಗೆ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿಕೆ ನೀಡಿದ್ದಾರೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನ್ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೌರತ್ವ ಕಾಯ್ದೆಯು ಪೌರತ್ವವನ್ನು ಕಿತ್ತುಕೊಳ್ಳುವ ಕಾಯ್ದೆಯಲ್ಲ. ನೆರೆ ರಾಷ್ಟ್ರಗಳಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ಬಂದವರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ. ಇಂತಹ ಕಾಯ್ದೆಯನ್ನು ವಿರೋಧಿಸುವವರು ಮಾನಸಿಕ ಅಸ್ವಸ್ಥರು. ಅವರು ವೈದ್ಯಕೀಯ ಚಿಕಿತ್ಸೆ ಪಡೆಯುವ ಅವಶ್ಯಕತೆಯಿದೆ ಎಂದಿದ್ದಾರೆ.