ಕರ್ನಾಟಕ

karnataka

ಸಿಎಎ ವಿರೋಧಿಗಳು ಮತ್ತು ಟಿಎಂಸಿ ಬೆಂಬಲಿಗರ ನಡುವೆ ಮಾರಾಮಾರಿ: ಗುಂಡೇಟಿಗೆ ಇಬ್ಬರು ಬಲಿ

By

Published : Jan 29, 2020, 6:25 PM IST

Updated : Jan 29, 2020, 8:09 PM IST

ಸಿಟಿಜನ್ ಫೋರಮ್ ನ ಸಿಎಎ ವಿರೋಧಿ ಪ್ರತಿಭಟನಾಕಾರರು ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗುಂಡೇಟಿಗೆ ಬಲಿಯಾಗಿದ್ದಾರೆ.

two anti-caa-protesters-shot-dead-in-clash-with-trinamool-supporters-in-bengal-410936.html
ಗುಂಡೇಟಿಗೆ ಇಬ್ಬರು ಬಲಿ

ಕೋಲ್ಕತ್ತಾ/ಪಶ್ಚಿಮ ಬಂಗಾಳ: ಸಿಟಿಜನ್ ಫೋರಮ್ ನ ಸಿಎಎ ವಿರೋಧಿ ಪ್ರತಿಭಟನಾಕಾರರು ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ನಡೆದ ಗಲಾಟೆ ವೇಳೆ ಇಬ್ಬರು ಗುಂಡೇಟಿಗೆ ಬಲಿಯಾಗಿದ್ದಾರೆ.

ಗುಂಡೇಟಿಗೆ ಇಬ್ಬರು ಬಲಿ

ಪಶ್ಚಿಮ ಬಂಗಾಳದ ಮುರ್ಶಿರಾಬಾದ್​ ಜಿಲ್ಲೆಯಲ್ಲಿ ಈ ಸಂಘರ್ಷ ನಡೆದಿದ್ದು, ಘಟನೆಯಲ್ಲಿ ಮೂವರಿಗೆ ಗುಂಡೇಟು ತಗುಲಿದೆ. ಇನ್ನು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಮೇಲೆ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸ್​ ಮೂಲಗಳ ಪ್ರಕಾರ ತಿದ್ದುಪಡಿ ಮಾಡಿದ ಕಾಯ್ದೆಯನ್ನು ವಿರೋಧಿಸಿ ಸ್ಥಳೀಯ ರಸ್ತೆಯಲ್ಲಿ ಬಂದ್​​ ನಡೆಸಲಾಗುತ್ತಿತ್ತು, ಈ ವೇಳೆ ಅಲ್ಲಿನ ಟಿಎಂಸಿ ನಾಯಕರು ಮತ್ತು ನಿವಾಸಿಗಳ ವೇದಿಕೆ ನಾಗರಿಕ್​ ಮಂಚ ನಿವಾಸಿಗಳ ನಡುವೆ ಎನ್​​ಆರ್​​ಸಿ ವಿಚಾರವಾಗಿ ಗಲಾಟೆ ಶುರುವಾಗಿತ್ತು. ಘಟನೆ ಹಿಂಸಾತ್ಮಕ ರೂಪ ಪಡೆದಿದ್ದು, ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಮತ್ತು ಸ್ಥಳೀಯ ನಿವಾಸಿಗಳು ಪರಸ್ಪರ ಗುಂಡು ಹಾರಿಸಿ, ಬಾಂಬುಗಳನ್ನು ಎಸೆದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ತನಿಖೆ ನಡೆಸುವಂತೆ ಟಿಎಂಸಿ ಎಂಪಿ ಅಬು ತಾಹೇರ್​ ಪೊಲೀಸರಿಗೆ ಮನವಿ ಮಾಡಿದ್ದಾರೆ. ಮತ್ತು ಘಟನೆಗೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು "ಎಂದು ತಾಹೆರ್ ಆಗ್ರಹಿಸಿದ್ದಾರೆ. ಇನ್ನು ಗುಂಡೇಟಿನಿಂದ ಗಾಯಗೊಂಡವರನ್ನು ಮುರ್ಶಿರಾಬಾದ್​​ ಮೆಡಿಕಲ್​ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿವೋರ್ವರು ಮಾಹಿತಿ ನೀಡಿದ್ದಾರೆ.

Last Updated : Jan 29, 2020, 8:09 PM IST

For All Latest Updates

ABOUT THE AUTHOR

...view details