ಕರ್ನಾಟಕ

karnataka

ETV Bharat / bharat

ತೆಲಂಗಾಣ: ಎಸ್​​ಸಿ, ಎಸ್ಟಿ ಕಾಯ್ದೆಯಡಿ ಇಬ್ಬರು ಶಾಸಕರ ವಿರುದ್ಧ ಪ್ರಕರಣ - TRS MLA Manchireddy Kishan Reddy

ಬಿಜೆಪಿ ಮುಖಂಡ ಬಂಗಾರು ಶ್ರುತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಐಎಂಐಎಂ ಶಾಸಕ ಅಹ್ಮದ್ ಬಲಾಲಾ ವಿರುದ್ಧ ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರತ್ಯೇಕ ಘಟನೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಬ್ಬರು ಶಾಸಕರ ವಿರುದ್ಧ ಪ್ರಕರಣ
ಇಬ್ಬರು ಶಾಸಕರ ವಿರುದ್ಧ ಪ್ರಕರಣ

By

Published : May 24, 2020, 6:07 PM IST

ಹೈದರಾಬಾದ್: ತೆಲಂಗಾಣದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಎಸ್​​ಸಿ ಮತ್ತು ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಇಬ್ಬರು ಶಾಸಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಮುಖಂಡ ಬಂಗಾರು ಶ್ರುತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಐಎಂಐಎಂ ಶಾಸಕ ಅಹ್ಮದ್ ಬಲಾಲಾ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ತಿಂಗಳ ಆರಂಭದಲ್ಲಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬವನ್ನು ಶಾಸಕರು ಭೇಟಿ ಮಾಡಿ, ನಿಂದನೆ ಮಾಡಿದ್ದಾರೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಬಾಲಾಲಾ ಕೂಡ ಈ ಪ್ರದೇಶಕ್ಕೆ ಭೇಟಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧವಿಲ್ಲದ ವಿಷಯದಲ್ಲಿ ಮೂರು ದಿನಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರೋಟೋಕಾಲ್ ಪಾಲಿಸಲಾಗಿಲ್ಲ ಮತ್ತು ದಲಿತ ಮಹಿಳೆಯನ್ನು ಗೌರವಿಸಿಲ್ಲ ಎಂದು ಮಹಿಳಾ ಸಾರ್ವಜನಿಕ ಪ್ರತಿನಿಧಿಯೊಬ್ಬರು ಶುಕ್ರವಾರ ನೀಡಿದ ದೂರಿನ ಹಿನ್ನೆಲೆಯಲ್ಲಿ ಟಿಆರ್​​ಎಸ್ ಶಾಸಕ ಮಂಚೈರೆಡ್ಡಿ ಕಿಶನ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ABOUT THE AUTHOR

...view details