ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟ ಮುಂದುವರೆದಿದ್ದು, ಇದರ ನಡುವೆ ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಆರ್ಥಿಕ ಚಟುವಟಿಕೆಗಳಿಗೆ ಗ್ರೀನ್ ಸಿಗ್ನಲ್ ನೀಡಲಾಗುತ್ತಿದೆ. ಇದೀಗ ಜಾರಿಯಲ್ಲಿರುವ ಅನ್ಲಾಕ್ 4.0 ಈ ತಿಂಗಳು ಅಂತ್ಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ದೇಶದಲ್ಲಿ ಅನ್ಲಾಕ್ 5.0 ಜಾರಿಯಾಗುವ ಸಾಧ್ಯತೆ ಇದೆ.
ಅನ್ಲಾಕ್ 5.0 ವೇಳೆ ಅನೇಕ ಆರ್ಥಿಕ ಚಟುವಟಕೆಗಳಿಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ದಟ್ಟವಾಗಿದೆ. ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡಿರುವ ಏಳು ರಾಜ್ಯದ ಸಿಎಂಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸಿ, ಮಾಹಾಮಾರಿ ನಿಯಂತ್ರಣ ಸೇರಿ ಅನೇಕ ಸಲಹೆ ಸೂಚನೆ ಪಡೆದುಕೊಂಡಿದ್ದಾರೆ. ಕೇಂದ್ರಕ್ಕೆ ಪ್ರಮುಖವಾಗಿ ಕರ್ನಾಟಕ, ಆಂಧ್ರಪ್ರದೇಶ, ಉತ್ತರಪ್ರದೇಶ, ತಮಿಳುನಾಡು, ಪಂಜಾಬ್, ದೆಹಲಿ ಹಾಗೂ ಮಹಾರಾಷ್ಟ್ರ ಅತಿ ಹೆಚ್ಚು ಆದಾಯ ತಂದುಕೊಡುವ ರಾಜ್ಯಗಳಾಗಿರುವ ಕಾರಣ ಇಲ್ಲಿನ ಆರ್ಥಿಕ ಚಟುವಟಿಕೆ ಪುನಾರಂಭ ಮಾಡುವ ಉದ್ದೇಶದಿಂದ ಅನ್ಲಾಕ್ 5.0 ವೇಳೆ ಅನೇಕ ಸೇವೆಗಳಿಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ.