ಕರ್ನಾಟಕ

karnataka

ETV Bharat / bharat

ಅಯೋಧ್ಯೆಯಲ್ಲಿ ಶ್ರೀರಾಮ, ಆಂಜನೇಯನ ಪೂಜೆ ನೆರವೇರಿಸಿದ ಸಿಎಂ ಯೋಗಿ! - ಅಯೋಧ್ಯೆಯಲ್ಲಿ ಶ್ರೀ ರಾಮ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ದೇವಾಲಯ ನಿರ್ಮಾಣಕ್ಕಾಗಿ ಎಲ್ಲಾ ರೀತಿಯ ಕೆಲಸ ನಡೆಯುತ್ತಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

UP chief minister Yogi Adityanath
UP chief minister Yogi Adityanath

By

Published : Jul 25, 2020, 3:45 PM IST

Updated : Jul 25, 2020, 4:23 PM IST

ಅಯೋಧ್ಯೆ: ಬಹು ನಿರೀಕ್ಷಿತ ಅಯೋಧ್ಯೆಯ ಶ್ರೀರಾಮ ಮಂದಿರ ದೇಗುಲದ ಭೂಮಿ ಪೂಜೆಯ ಶಿಲಾನ್ಯಾಸ ಬರುವ ಅಗಸ್ಟ್ 5ರಂದು ನಡೆಯಲಿದ್ದು, ಅದಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ಆರಂಭಗೊಂಡಿವೆ. ಇದರ ಮಧ್ಯೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ವೇಳೆ ಶ್ರೀರಾಮನ ಪೂಜೆ ನೆರವೇರಿಸಿದ ಯೋಗಿ ಆದಿತ್ಯನಾಥ್​​, ಭರತ, ಶತೃಘ್ನ ಹಾಗೂ ಲಕ್ಷ್ಮಣರ ಮೂರ್ತಿಗಳನ್ನ ಹೊಸ ಆಸನದ ಮೇಲೆ ಇರಿಸಿದರು. ಇದಾದ ಬಳಿಕ ಆಂಜನೇಯನ ಪೂಜೆ ಸಹ ಮಾಡಿದರು.

ಅಯೋಧ್ಯೆಯಲ್ಲಿ ಯೋಗಿ ಪೂಜೆ-ಪುನಸ್ಕಾರ

ಅಯೋಧ್ಯೆಗೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದ ಅವರು ಕೆಲವೊಂದು ಸೂಚನೆ ನೀಡಿದರು. ಅಗಸ್ಟ್​ 5ರಂದು ಮಧ್ಯಾಹ್ನ 12 ಗಂಟೆಗೆ ಭೂಮಿ ಪೂಜೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ, ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಸೇರಿದಂತೆ 300ಕ್ಕೂ ಅಧಿಕ ಗಣ್ಯರು ಭಾಗಿಯಾಗಲಿದ್ದಾರೆ.

ಅಯೋಧ್ಯೆಯಲ್ಲಿ ಭೂಮಿ ಪೂಜೆಯ ಕಾರ್ಯಕ್ರಮ ವೀಕ್ಷಣೆ ಮಾಡಲು ಎಲ್‍ಇಡಿ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ರೀತಿಯ ಯೋಜನೆ ರೂಪಿಸಲಾಗುತ್ತಿದೆ.

Last Updated : Jul 25, 2020, 4:23 PM IST

ABOUT THE AUTHOR

...view details