ಕರ್ನಾಟಕ

karnataka

ETV Bharat / bharat

ಮುಂದುವರಿದ 'ಕೈ' ಬಿಕ್ಕಟ್ಟು... ಎಐಸಿಸಿ ಮಹತ್ವದ ಸ್ಥಾನಕ್ಕೆ ವಿವೇಕ್ ತಂಖಾ ರಾಜೀನಾಮೆ - ಲೋಕಸಭೆ ಚುನಾವಣೆ

ವಿವೇಕ್ ತಂಖಾ ರಾಜೀನಾಮೆ ಬೆನ್ನಲ್ಲೇ ಇನ್ನಷ್ಟು ಪದಾಧಿಕಾರಿಗಳು ಹುದ್ದೆ ತ್ಯಜಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಪಕ್ಷದ ಆಂತರಿಕ ವಲಯದಲ್ಲಿ ಕೇಳಿ ಬರುತ್ತಿವೆ.

ವಿವೇಕ್ ತಂಖಾ

By

Published : Jun 28, 2019, 11:33 AM IST

ನವದೆಹಲಿ: ಲೋಕಸಭೆ ಚುನಾವಣೆಯ ಶೋಚನೀಯ ಸೋಲಿನ ಬಳಿಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್​ ಆಂತರಿಕ ವಲಯದಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದು, ಇದೀಗ ಹಿರಿಯ ನಾಯಕ ವಿವೇಕ್​​​​ ತಂಖಾ ಎಐಸಿಸಿಯ ಕಾನೂನು ಮಾನವ ಹಕ್ಕುಗಳು ಮತ್ತು ಆರ್‌ಟಿಐ ಇಲಾಖೆಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ಟ್ವೀಟ್ ಮಾಡಿರುವ ವಿವೇಕ್ ತಂಖಾ, ಕಾಂಗ್ರೆಸ್​​ ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ, ಹೋರಾಟದ ಮನಸ್ಥಿತಿಯನ್ನು ತುಂಬಿ. ರಾಹುಲ್ ಗಾಂಧಿಯವರಲ್ಲಿ ಬದ್ಧತೆ ಇದೆ ಎಂದಿದ್ದಾರೆ.

ವಿವೇಕ್ ತಂಖಾ ರಾಜೀನಾಮೆ ಬೆನ್ನಲ್ಲೇ ಇನ್ನಷ್ಟು ಪದಾಧಿಕಾರಿಗಳು ಹುದ್ದೆ ತ್ಯಜಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಪಕ್ಷದ ಆಂತರಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಎರಡು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ಸಂಸದೀಯ ಸಭೆಯಲ್ಲಿ ರಾಹುಲ್ ಗಾಂಧಿ ತಾವು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎನ್ನುವ ಮೂಲಕ ಹಿರಿಯ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.

ABOUT THE AUTHOR

...view details