ಕರ್ನಾಟಕ

karnataka

ETV Bharat / bharat

ದೀದಿ ಸರ್ಕಾರದ ವಿರುದ್ದ ಬಿಜೆಪಿಯಿಂದ 'ನಬಣ್ಣ ಚಲೋ' ಆಂದೋಲನ - ಪಶ್ಚಿಮ ಬಂಗಾಳ ಆಂದೋಲನ

ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದ ಲೋಪಗಳನ್ನು ಎತ್ತಿ ಹಿಡಿಯುವ ಸಲುವಾಗಿ ಬಿಜೆಪಿ ಕಾರ್ಯಕರ್ತರು 'ನಬಣ್ಣ ಚಲೋ' ಎಂಬ ಆಂದೋಲನವನ್ನು ಹಮ್ಮಿಕೊಂಡಿದ್ದು, ದೀದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

'Nabanna Chalo'
'ನಬಣ್ಣ ಚಲೋ' ಆಂದೋಲನ

By

Published : Oct 8, 2020, 2:14 PM IST

Updated : Oct 8, 2020, 3:41 PM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ 'ನಬಣ್ಣ ಚಲೋ' ಆಂದೋಲನವನ್ನು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಇಂದು ಹಮ್ಮಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ನಬಣ್ಣ ಚಲೋ ಆಂದೋಲನದಲ್ಲಿ ಬಿಜೆಪಿ ಕಾರ್ಯಕರ್ತರು

ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ನೇತೃತ್ವದಲ್ಲಿ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಮಮತಾ ಸರ್ಕಾರದ ಭ್ರಷ್ಟಾಚಾರ ಹಾಗೂ ಗೂಂಡಾಗಿರಿಯನ್ನು ಎತ್ತಿ ತೋರಿಸಲು ಈ ಆಂದೋಲನಕ್ಕೆ ಕರೆ ನೀಡಲಾಗಿದೆ ಎಂದು ಬಿಜೆಪಿ ತಿಳಿಸಿದೆ. ಕೋಲ್ಕತ್ತಾದ ಬಿಜೆಪಿಯ ರಾಜ್ಯ ಕೇಂದ್ರ ಕಚೇರಿಯ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿರುವ ಪಕ್ಷದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಕ್ಟೋಬರ್ 2 ರಂದು, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ್ದ ದಿಲೀಪ್ ಘೋಷ್, ಭ್ರಷ್ಟ ಮತ್ತು ಗೂಂಡಾ ರಾಜಕೀಯ ಮಾಡುತ್ತಿರುವ ಸರ್ಕಾರದ ವಿರುದ್ದ ರಾಜ್ಯ ಘಟಕವು ಅಕ್ಟೋಬರ್ 8 ರಂದು ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಹೇಳಿಕೆ ನೀಡಿದ್ದರು.

Last Updated : Oct 8, 2020, 3:41 PM IST

ABOUT THE AUTHOR

...view details